ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಡಿಗೆರೆ | ಗುಂಡೇಟು: ವ್ಯಕ್ತಿ ಸಾವು

Last Updated 28 ಏಪ್ರಿಲ್ 2020, 7:43 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನ ಬಣಕಲ್‌ ಬಳಿಯ ಚೇಗು ಗ್ರಾಮದ ಲಕ್ಷ್ಮಣಗೌಡ ಎಂಬಾತ ಸಹೋದರ ಮಂಜಯ್ಯಗೆ (65) ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ.

ಸೋಮವಾರ ರಾತ್ರಿ 9.30ರ ಸುಮಾರಿಗೆ ಕೃತ್ಯ ನಡೆದಿದೆ. ಕೆರೆ ಸಮೀಪದ ಜಮೀನಿನಲ್ಲಿ ಜೆಸಿಬಿಯಲ್ಲಿ ಮಣ್ಣು ಹಾಕಿಸುವ ಕೆಲಸ ಮಾಡಿಸಿ ಮಂಜಯ್ಯ ಬರುವುದನ್ನು ಕಾದಿದ್ದು ಆರೋಪಿ ಕೃತ್ಯ ಎಸಗಿದ್ದಾನೆ. ಆಸ್ತಿ ವಿಚಾರದಲ್ಲಿ ಸಹೋದರರ ನಡುವೆ ಜಗಳವಾಗಿತ್ತು ಎಂದು ಮೂಲಗಳು ತಿಳಿಸಿವೆ.

ಆಸ್ಪತ್ರೆಗೆ ಮೂಡಿಗೆರೆಗೆ ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಮಂಜಯ್ಯ ಮೃತಪಟ್ಟಿದ್ದರು. ‌ಮಂಜಯ್ಯನ ಮನೆಯವರು ಲಕ್ಷ್ಮಣಗೌಡನೊಂದಿಗೆ ಗಲಾಟೆ ಮಾಡಿದ್ದು, ಆತನಿಗೆ ಸಣ್ಣಪುಟ್ಟ ಪೆಟ್ಟಾಗಿದೆ. ಆತನನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಬಣಕಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT