<p><strong>ಮೂಡಿಗೆರೆ:</strong> ತಾಲ್ಲೂಕಿನ ಮುತ್ತಿಗೆಪುರ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ಫಿಲಿಪ್ ಕ್ರಿಸ್ಟೋಲಿನಾ (63) ಗಾಯಗೊಂಡವರು. ಇವರು, ಮಧ್ಯರಾತ್ರಿ 2ರ ಸುಮಾರಿಗೆ ನಾಯಿ ಬೊಗಳಿದ ಶಬ್ದ ಕೇಳಿ ಮನೆಯಿಂದ ಹೊರಬಂದಾಗ, ಮನೆಯ ಸಮೀಪದಲ್ಲಿಯೇ ಬಂದಿದ್ದ ಕಾಡಾನೆ ಏಕಾಏಕಿ ಫಿಲಿಪ್ ಅವರ ದಾಳಿ ನಡೆಸಿದೆ.</p>.<p>ಕಾಡಾನೆ ತನ್ನ ಸೊಂಡಿಲಿನಿಂದ ಫಿಲಿಪ್ ಅವರನ್ನು ಎಸೆದಿದ್ದು, ಅವರಿಗೆ ಕಾಲು, ಎದೆ ಮತ್ತು ಕೈ ಭಾಗಕ್ಕೆ ತೀವ್ರ ಗಾಯಗಳಾಗಿವೆ. ಕೂಡಲೇ ಅವರನ್ನು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಳಿಕ, ಹೆಚ್ಚಿನ ಚಿಕಿತ್ಸೆಗೆ ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಫಿಲಿಪ್ ಕ್ಯಾಸ್ಟೋಲಿನಾ ಅವರು ಟ್ರ್ಯಾಕ್ಟರ್ ಮೂಲಕ ಬದುಕು ಸಾಗಿಸುತ್ತಿದ್ದು, ಕುಟುಂಬದ ಆಧಾರವಾಗಿದ್ದ ಅವರಿಗೆ ಗಂಭೀರ ಗಾಯವಾದ ಹಿನ್ನೆಲೆ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದಂತಾಗಿದೆ.</p>.<p>ಗ್ರಾಮದ ಕಾಫಿ ತೋಟಗಳಲ್ಲಿ ಕಳೆದ ಕೆಲವು ವಾರಗಳಿಂದ 35 ಕಾಡಾನೆಗಳು ವಾಸ್ತವ್ಯ ಹೂಡಿದ್ದು, ಮುತ್ತಿಗೆಪುರ ಸೇರಿದಂತೆ ಮಾಕೋನಹಳ್ಳಿ, ಕಾರಬೈಲ್, ದುಂಡುಗ, ಹಳಸೆ ಗ್ರಾಮಗಳಲ್ಲಿ ಸಂಚರಿಸುತ್ತಾ ತೀವ್ರ ಉಪಟಳ ನೀಡುತ್ತಿವೆ. ಜನರ ನೋವು ಕೇಳುವವರು ಇಲ್ಲದಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.</p>.<p>ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮೂಡಿಗೆರೆ ವಲಯ ಅರಣ್ಯ ಅಧಿಕಾರಿ ಕಾವ್ಯ ಅವರ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ:</strong> ತಾಲ್ಲೂಕಿನ ಮುತ್ತಿಗೆಪುರ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ಫಿಲಿಪ್ ಕ್ರಿಸ್ಟೋಲಿನಾ (63) ಗಾಯಗೊಂಡವರು. ಇವರು, ಮಧ್ಯರಾತ್ರಿ 2ರ ಸುಮಾರಿಗೆ ನಾಯಿ ಬೊಗಳಿದ ಶಬ್ದ ಕೇಳಿ ಮನೆಯಿಂದ ಹೊರಬಂದಾಗ, ಮನೆಯ ಸಮೀಪದಲ್ಲಿಯೇ ಬಂದಿದ್ದ ಕಾಡಾನೆ ಏಕಾಏಕಿ ಫಿಲಿಪ್ ಅವರ ದಾಳಿ ನಡೆಸಿದೆ.</p>.<p>ಕಾಡಾನೆ ತನ್ನ ಸೊಂಡಿಲಿನಿಂದ ಫಿಲಿಪ್ ಅವರನ್ನು ಎಸೆದಿದ್ದು, ಅವರಿಗೆ ಕಾಲು, ಎದೆ ಮತ್ತು ಕೈ ಭಾಗಕ್ಕೆ ತೀವ್ರ ಗಾಯಗಳಾಗಿವೆ. ಕೂಡಲೇ ಅವರನ್ನು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಳಿಕ, ಹೆಚ್ಚಿನ ಚಿಕಿತ್ಸೆಗೆ ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಫಿಲಿಪ್ ಕ್ಯಾಸ್ಟೋಲಿನಾ ಅವರು ಟ್ರ್ಯಾಕ್ಟರ್ ಮೂಲಕ ಬದುಕು ಸಾಗಿಸುತ್ತಿದ್ದು, ಕುಟುಂಬದ ಆಧಾರವಾಗಿದ್ದ ಅವರಿಗೆ ಗಂಭೀರ ಗಾಯವಾದ ಹಿನ್ನೆಲೆ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದಂತಾಗಿದೆ.</p>.<p>ಗ್ರಾಮದ ಕಾಫಿ ತೋಟಗಳಲ್ಲಿ ಕಳೆದ ಕೆಲವು ವಾರಗಳಿಂದ 35 ಕಾಡಾನೆಗಳು ವಾಸ್ತವ್ಯ ಹೂಡಿದ್ದು, ಮುತ್ತಿಗೆಪುರ ಸೇರಿದಂತೆ ಮಾಕೋನಹಳ್ಳಿ, ಕಾರಬೈಲ್, ದುಂಡುಗ, ಹಳಸೆ ಗ್ರಾಮಗಳಲ್ಲಿ ಸಂಚರಿಸುತ್ತಾ ತೀವ್ರ ಉಪಟಳ ನೀಡುತ್ತಿವೆ. ಜನರ ನೋವು ಕೇಳುವವರು ಇಲ್ಲದಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.</p>.<p>ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮೂಡಿಗೆರೆ ವಲಯ ಅರಣ್ಯ ಅಧಿಕಾರಿ ಕಾವ್ಯ ಅವರ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>