ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿಗೆ ಒತ್ತು ನೀಡಿ ಅನುದಾನ ಮಂಜೂರು ಮಾಡಿದೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆಗಳ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ನಿಧಿಯಿಂದ ₹15 ಕೋಟಿ, ತಾಲ್ಲೂಕು ಪಂಚಾಯಿತಿಗೆ ರಸ್ತೆ ಕಾಮಗಾರಿಗೆ ₹1.23 ಕೋಟಿ, ಎಸ್ಸಿಪಿ ಟಿಎಸ್ಪಿ ಯೋಜನೆಯಡಿ ₹75 ಲಕ್ಷ, ಲೋಕೋಪಯೋಗಿ ಇಲಾಖೆಯ ₹40 ಕೋಟಿ ಕಾಮಗಾರಿ ಪ್ರಗತಿಯಲ್ಲಿದೆ. ₹59 ಕೋಟಿ ವೆಚ್ಚದ ಕಾಮಗಾರಿ ಆರಂಭವಾಗಬೇಕಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಅನುದಾನ ಬಿಡುಗಡೆಗೊಳಿಸಿಲ್ಲ ಎಂಬ ಟೀಕೆ ಸರಿಯಲ್ಲ ಎಂದರು.