<p><strong>ಚಿಕ್ಕಮಗಳೂರು:</strong> ಲಭ್ಯ ಇರುವ ₹10.30 ಕೋಟಿ ಅನುದಾನದಲ್ಲಿ ವೈದ್ಯಕೀಯ ಕಾಲೇಜಿಗೆ ಕುಡಿಯುವ ನೀರು ಮತ್ತು ವಿದ್ಯುತ್ ಸಮಸ್ಯೆ ಶೀಘ್ರವೇ ಪೂರ್ಣಗೊಳಿಸಲು ತಿಳಿಸಲಾಗಿದೆ ಎಂದು ವಿಧಾನ ಪರಿಷತ್ ಅರ್ಜಿಗಳ ಸಮಿತಿ ಅಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಹೇಳಿದರು.</p>.<p>ವೈದ್ಯಕೀಯ ಕಾಲೇಜು ಸೇರಿದಂತೆ ಜಿಲ್ಲೆಯ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ನಂತರ ಅಧಿಕಾರಿಗಳ ಸಭೆ ನಡೆಸಿದ ಅವರು, ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು.</p>.<p>‘ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ್ದೇವೆ. ಸಮಸ್ಯೆ ಇರುವುದು ನಿಜ, ಸಮೀಪದಲ್ಲಿ ಕೆರೆ ಅಥವಾ ನೀರಿನ ಮೂಲ ಇರುವ ಕಡೆ 2 ಕೊಳವೆಬಾವಿ ಕೊರೆಸಿ ತಾತ್ಕಾಲಿಕ ನೀರು ಪೂರೈಸಬೇಕು. ವಿದ್ಯುತ್ ಸಂಪರ್ಕ ಕಲ್ಪಿಸಲು ಇರುವ ಅಡಚಣೆ ಬಗೆಹರಿಸಿ ಶೀಘ್ರದಲ್ಲಿ ಸಂಪರ್ಕ ಕಲ್ಪಿಸಬೇಕು. ಸದ್ಯಕ್ಕೆ ಇಲ್ಲಿರುವ ₹10.30 ಕೋಟಿ ಅನುದಾನವನ್ನು ಬಳಕೆ ಮಾಡಿಕೊಳ್ಳಲು ಸೂಚಿಸಲಾಗಿದೆ’ ಎಂದರು.</p>.<p>ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಾಣವಾಗುತ್ತಿರುವ ವಸತಿಗೃಹ ಕಾಮಗಾರಿ ಪೂರ್ಣಕ್ಕೆ ಇರುವ ಸಮಸ್ಯೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಇದಕ್ಕೆ ಸಾಕಷ್ಟು ಅನುದಾನ ಅಗತ್ಯ ಇರುವುದರಿಂದ ಸದ್ಯದಲ್ಲೇ ಆರಂಭವಾಗುವ ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು ಎಂದು ಹೇಳಿದರು.</p>.<p>ಕಡೂರು ತಾಲ್ಲೂಕಿನ ಎಮ್ಮೆದೊಡ್ಡಿ ಸುತ್ತಮುತ್ತ ಇರುವ 22 ಗ್ರಾಮಗಳ ಜನ ವಾಸಿಸುವ ಭೂಮಿ ಈಗ ಅರಣ್ಯ ಇಲಾಖೆ ಹೆಸರಿನಲ್ಲಿದೆ. ಈ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಅರಣ್ಯ ಇಲಾಖೆ ಕಾರ್ಯದರ್ಶಿ ಮನೋಜ್ಕುಮಾರ್ ಅವರು ಸಭೆಯಲ್ಲಿ ಭಾಗವಹಿಸಿದ್ದರು ಎಂದು ವಿವರಿಸಿದರು.</p>.<p>ಎಮ್ಮೆದೊಡ್ಡಿ ಸೇರಿ 22 ಗ್ರಾಮಗಳ 13 ಸಾವಿರ ಎಕರೆಗೆ ಬದಲಿಯಾಗಿ ಭೂಮಿ ನೀಡಲು ಗುರುತಿಸಲಾಗಿದೆ ಎಂಬ ಮಾಹಿತಿಯನ್ನು ಜಿಲ್ಲಾಧಿಕಾರಿ ನೀಡಿದ್ದಾರೆ. ಪರ್ಯಾಯ ಭೂಮಿಯನ್ನು ಅರಣ್ಯ ಇಲಾಖೆಗೆ ನೀಡಿದರೆ ಅಲ್ಲಿನ ಜನರ ಸಮಸ್ಯೆ ಪರಿಹಾರವಾಗಲಿದೆ ಎಂದರು.</p>.<p>‘ಕಡೂರು, ಚಿಕ್ಕಮಗಳೂರು ಮತ್ತು ತರೀಕೆರೆ ತಾಲ್ಲೂಕಿನಲ್ಲಿ ಅನುಷ್ಠಾನಗೊಳಿಸಿರುವ ಬಹುಗ್ರಾಮ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಚರ್ಚಿಸಲಾಯಿತು. ಅಲ್ಲಿನ ಕೆಲವು ಕಡೆ ಪೈಲ್ಲೈನ್ ಮತ್ತಿತರೆ ಕಾಮಗಾರಿ ನಡೆಸಲು ಅರಣ್ಯ ಇಲಾಖೆ ಎನ್ಒಸಿ ಬೇಕಿದೆ. ಅದಕ್ಕೆ ಅರ್ಜಿ ಹಾಕಿದ್ದಾರೆ. ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಿ ಸಮಸ್ಯೆ ಬಗೆಹರಿಸುತ್ತೇವೆ’ ಎಂದು ತಿಳಿಸಿದರು.</p>.<p>ಭದ್ರಾ ಉಪಕಣಿವೆ ಯೋಜನೆಯ ಭೂಮಿ ಪೂಜೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯದಲ್ಲೇ ನೆರವೇರಿಸಲಿದ್ದಾರೆ ಎಂದು ಹೇಳಿದರು. ಸಮಿತಿ ಸದಸ್ಯರಾದ ಯು.ಬಿ.ಬಣಕರ್, ಎಚ್.ಡಿ.ತಮ್ಮಯ್ಯ, ಕೆ.ಎಸ್.ಆನಂದ್,ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಲಭ್ಯ ಇರುವ ₹10.30 ಕೋಟಿ ಅನುದಾನದಲ್ಲಿ ವೈದ್ಯಕೀಯ ಕಾಲೇಜಿಗೆ ಕುಡಿಯುವ ನೀರು ಮತ್ತು ವಿದ್ಯುತ್ ಸಮಸ್ಯೆ ಶೀಘ್ರವೇ ಪೂರ್ಣಗೊಳಿಸಲು ತಿಳಿಸಲಾಗಿದೆ ಎಂದು ವಿಧಾನ ಪರಿಷತ್ ಅರ್ಜಿಗಳ ಸಮಿತಿ ಅಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಹೇಳಿದರು.</p>.<p>ವೈದ್ಯಕೀಯ ಕಾಲೇಜು ಸೇರಿದಂತೆ ಜಿಲ್ಲೆಯ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ನಂತರ ಅಧಿಕಾರಿಗಳ ಸಭೆ ನಡೆಸಿದ ಅವರು, ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು.</p>.<p>‘ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ್ದೇವೆ. ಸಮಸ್ಯೆ ಇರುವುದು ನಿಜ, ಸಮೀಪದಲ್ಲಿ ಕೆರೆ ಅಥವಾ ನೀರಿನ ಮೂಲ ಇರುವ ಕಡೆ 2 ಕೊಳವೆಬಾವಿ ಕೊರೆಸಿ ತಾತ್ಕಾಲಿಕ ನೀರು ಪೂರೈಸಬೇಕು. ವಿದ್ಯುತ್ ಸಂಪರ್ಕ ಕಲ್ಪಿಸಲು ಇರುವ ಅಡಚಣೆ ಬಗೆಹರಿಸಿ ಶೀಘ್ರದಲ್ಲಿ ಸಂಪರ್ಕ ಕಲ್ಪಿಸಬೇಕು. ಸದ್ಯಕ್ಕೆ ಇಲ್ಲಿರುವ ₹10.30 ಕೋಟಿ ಅನುದಾನವನ್ನು ಬಳಕೆ ಮಾಡಿಕೊಳ್ಳಲು ಸೂಚಿಸಲಾಗಿದೆ’ ಎಂದರು.</p>.<p>ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಾಣವಾಗುತ್ತಿರುವ ವಸತಿಗೃಹ ಕಾಮಗಾರಿ ಪೂರ್ಣಕ್ಕೆ ಇರುವ ಸಮಸ್ಯೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಇದಕ್ಕೆ ಸಾಕಷ್ಟು ಅನುದಾನ ಅಗತ್ಯ ಇರುವುದರಿಂದ ಸದ್ಯದಲ್ಲೇ ಆರಂಭವಾಗುವ ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು ಎಂದು ಹೇಳಿದರು.</p>.<p>ಕಡೂರು ತಾಲ್ಲೂಕಿನ ಎಮ್ಮೆದೊಡ್ಡಿ ಸುತ್ತಮುತ್ತ ಇರುವ 22 ಗ್ರಾಮಗಳ ಜನ ವಾಸಿಸುವ ಭೂಮಿ ಈಗ ಅರಣ್ಯ ಇಲಾಖೆ ಹೆಸರಿನಲ್ಲಿದೆ. ಈ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಅರಣ್ಯ ಇಲಾಖೆ ಕಾರ್ಯದರ್ಶಿ ಮನೋಜ್ಕುಮಾರ್ ಅವರು ಸಭೆಯಲ್ಲಿ ಭಾಗವಹಿಸಿದ್ದರು ಎಂದು ವಿವರಿಸಿದರು.</p>.<p>ಎಮ್ಮೆದೊಡ್ಡಿ ಸೇರಿ 22 ಗ್ರಾಮಗಳ 13 ಸಾವಿರ ಎಕರೆಗೆ ಬದಲಿಯಾಗಿ ಭೂಮಿ ನೀಡಲು ಗುರುತಿಸಲಾಗಿದೆ ಎಂಬ ಮಾಹಿತಿಯನ್ನು ಜಿಲ್ಲಾಧಿಕಾರಿ ನೀಡಿದ್ದಾರೆ. ಪರ್ಯಾಯ ಭೂಮಿಯನ್ನು ಅರಣ್ಯ ಇಲಾಖೆಗೆ ನೀಡಿದರೆ ಅಲ್ಲಿನ ಜನರ ಸಮಸ್ಯೆ ಪರಿಹಾರವಾಗಲಿದೆ ಎಂದರು.</p>.<p>‘ಕಡೂರು, ಚಿಕ್ಕಮಗಳೂರು ಮತ್ತು ತರೀಕೆರೆ ತಾಲ್ಲೂಕಿನಲ್ಲಿ ಅನುಷ್ಠಾನಗೊಳಿಸಿರುವ ಬಹುಗ್ರಾಮ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಚರ್ಚಿಸಲಾಯಿತು. ಅಲ್ಲಿನ ಕೆಲವು ಕಡೆ ಪೈಲ್ಲೈನ್ ಮತ್ತಿತರೆ ಕಾಮಗಾರಿ ನಡೆಸಲು ಅರಣ್ಯ ಇಲಾಖೆ ಎನ್ಒಸಿ ಬೇಕಿದೆ. ಅದಕ್ಕೆ ಅರ್ಜಿ ಹಾಕಿದ್ದಾರೆ. ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಿ ಸಮಸ್ಯೆ ಬಗೆಹರಿಸುತ್ತೇವೆ’ ಎಂದು ತಿಳಿಸಿದರು.</p>.<p>ಭದ್ರಾ ಉಪಕಣಿವೆ ಯೋಜನೆಯ ಭೂಮಿ ಪೂಜೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯದಲ್ಲೇ ನೆರವೇರಿಸಲಿದ್ದಾರೆ ಎಂದು ಹೇಳಿದರು. ಸಮಿತಿ ಸದಸ್ಯರಾದ ಯು.ಬಿ.ಬಣಕರ್, ಎಚ್.ಡಿ.ತಮ್ಮಯ್ಯ, ಕೆ.ಎಸ್.ಆನಂದ್,ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>