ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪಾದಯಾತ್ರೆ ನಾಟಕ ಮಾಡುವುದರ ಬದಲಿಗೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ತಮಿಳುನಾಡಿಗೆ ನಿಯೋಗ ಒಯ್ದು ಅಲ್ಲಿನ ಕಾಂಗ್ರೆಸ್ ಮುಖಂಡ ಚಿದಂಬರಂ, ಡಿಎಂಕೆಯ ಸ್ಟಾಲಿನ್ ಅವರನ್ನು ಒಪ್ಪಿಸಿದರೆ ಕೆಲಸ ಸುಲಭವಾಗುತ್ತದೆ. ಮೇಕೆದಾಟು ಯೋಜನೆಗೆ ಆಕ್ಷೇಪಣೆ ಇಲ್ಲ ಎಂದು ಅವರು ಹೇಳಿದರೆ ಎಲ್ಲ ಅಡೆತಡೆ ನಿವಾರಣೆಯಾಗುತ್ತವೆ’ ಎಂದರು.