ತರೀಕೆರೆ: ತಾಲ್ಲೂಕಿನ ಸೌಲಭ್ಯ ವಂಚಿತ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ ಆಸರೆಯಾಗಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಶಾಲಾ ಕೈತೋಟ, ಹಸಿರು ಗ್ರಾಮ ಯೋಜನೆಯಲ್ಲಿ ಅರಣ್ಯೀಕರಣ, ಶಾಲೆಯ ಕಾಂಪೌಂಡ್, ಶೌಚಾಲಯ, ಆಟದ ಮೈದಾನ, ಬಿಸಿಯೂಟದ ದಾಸೋಹ ಭವನವನ್ನು ನರೇಗಾ ಅಡಿಯಲ್ಲಿ ನಿರ್ಮಿಸುತ್ತಿರುವುದು ಸರ್ಕಾರಿ ಶಾಲೆಗಳಿಗೆ ಪುನರುಜ್ಜೀವನ ನೀಡಿದಂತಾಗಿದೆ.