ಚಿಕ್ಕಮಗಳೂರು: ತಾಲ್ಲೂಕಿನ ಆಲ್ದೂರು ಸಮೀಪದ ಅರೇನೂರಿನಲ್ಲಿ ಕಾಫಿ ತೋಟದಲ್ಲಿ ಗುಡ್ಡದ ಮಣ್ಣು ಕುಸಿದಿರುವ ಪ್ರದೇಶವನ್ನು ಸಚಿವ ಬಿ.ಎ.ಬಸವರಾಜು (ಭೈರತಿ ಬಸವರಾಜು) ವೀಕ್ಷಿಸಿದರು.
ಕಾಫಿ ಗಿಡಗಳು ಹಾನಿಯಾಗಿರುವುದು, ತೋಟದಲ್ಲಿ ಕೆಸರು ನೀರು ಹರಿಯುತ್ತಿರುವುದು, ರಸ್ತೆ ಹದಗೆಟ್ಟಿರುವುದನ್ನು ವೀಕ್ಷಿಸಿದರು.
'ಮಳೆ ಹಾನಿ ಪ್ರದೇಶ ವೀಕ್ಷಣೆ ಮಾಡಿದ್ದೇವೆ. ಸಂತ್ರಸ್ತರಿಗೆ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವದು' ಎಂದು ಸಚಿವ ಬಸವರಾಜು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ನೇಮಕ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ( ಭೈರತಿ ಬಸವರಾಜ) ಅವರಿಗೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ವಹಿಸಲಾಗಿದೆ. ದಾವಣಗೆರೆ ಜಿಲ್ಲಾ ಉಸ್ತುವಾರಿ ಜೊತೆಗೆ ಈಗ ಚಿಕ್ಕಮಗಳೂರು ಉಸ್ತುವಾರಿ ವಹಿಸಲಾಗಿದೆ.