<p><strong>ಚಿಕ್ಕಮಗಳೂರು: </strong>ನಗರದಲ್ಲಿ ‘ಅಮೃತ್’ (ಅಟಲ್ ನಗರ ನವೀಕರಣ ಹಾಗೂ ಪುನರುಜ್ಜೀವನ) ಯೋಜನೆಯನ್ನು ಡಿಸೆಂಬರ್ನಲ್ಲಿ ಲೋಕಾರ್ಪಣೆಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್ಇಲ್ಲಿ ಶುಕ್ರವಾರ ತಿಳಿಸಿದರು.</p>.<p>ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ವಾಜಪೇಯಿ ಬಡಾವಣೆಯನ್ನು ಅದೇ ದಿನ ಲೋಕಾರ್ಪಣೆಗೊಳಿಸಲು ಉದ್ದೇಶಿಸಲಾಗಿದೆ. ಡಿಸೆಂಬರ್ನೊಳಗೆ ಒಳಚರಂಡಿ (ಯಜಿಡಿ) 100 ಕಿ.ಮೀ ಕಾಮಗಾರಿ ಮುಗಿಸಬೇಕು ಎಂದೂ ಸೂಚನೆ ನೀಡಿದ್ದೇನೆ. ಈ ಎಲ್ಲ ಕಾರ್ಯಕ್ರಮಗಳ ಉದ್ಘಾಟನೆ ಮುಖ್ಯಮಂತ್ರಿವರನ್ನು ಆಹ್ವಾನಿಸಲಾಗುವುದು ಎಂದೂ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /><br />ಜಿಲ್ಲೆಯಲ್ಲಿ ಚಿಕ್ಕಮಗಳೂರು ಮತ್ತು ಬೀರೂರು ಹೊರತಾಗಿ ಇತರೆಡೆಗಳಲ್ಲಿ ಒಳಚರಂಡಿ ಸೌಲಭ್ಯ ಇಲ್ಲ।. ಈ ನಿಟ್ಟಿನಲ್ಲಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.<br /><br />ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ಮೇಲ್ಡರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಸ್ತಾವ ಸಲ್ಲಿಕೆಯಾಗಿದ್ದರೆ ಪರಿಶೀಲಿಸಲಾಗುವುದು. ಜನಸಂಖ್ಯೆ, ವಿಸ್ತೀರ್ಣ ಇತ್ಯಾದಿ ಮಾನದಂಡಗಳನ್ನು ಆಧರಿಸಿ ಕ್ರಮ ವಹಿಸಲಾಗುವುದು ಎಂದು ಉತ್ತರಿಸಿದರು.<br /><br />ಹೊರರಾಜ್ಯಗಳ ಗುತ್ತಿಗೆದಾರರಿಗೆ ರಾಜ್ಯದಲ್ಲಿ ಕಾಮಗಾರಿ ಗುತ್ತಿಗೆಗೆ ಅವಕಾಶ ನೀಡದಿರಲು ಚಿಂತನೆ ನಡೆದಿದೆ. ಮುಖ್ಯಮಂತ್ರಿ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಪುರಸಭೆ, ಪಟ್ಟಣ ಪಂಚಾಯಿತಿ, ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ನಿಟ್ಟಿನಲ್ಲಿ ಸಂಪುಟ ಉಪಸಮಿತಿ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಿದೆ ಎಂದರು.<br /><br />ಸರ್ಕಾರ ನಿರ್ಮಿಸುವ ಬಡಾವಣೆಗಳಲ್ಲಿ ಪತ್ರಕರ್ತರಿಗೆ ಶೇ 5ರಷ್ಟು ನಿವೇಶನಗಳನ್ನು ನಿಗದಿಪಡಿಸಲು ತೀರ್ಮಾನ ಕೈಗೊಂಡಿದ್ದೇವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>ನಗರದಲ್ಲಿ ‘ಅಮೃತ್’ (ಅಟಲ್ ನಗರ ನವೀಕರಣ ಹಾಗೂ ಪುನರುಜ್ಜೀವನ) ಯೋಜನೆಯನ್ನು ಡಿಸೆಂಬರ್ನಲ್ಲಿ ಲೋಕಾರ್ಪಣೆಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್ಇಲ್ಲಿ ಶುಕ್ರವಾರ ತಿಳಿಸಿದರು.</p>.<p>ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ವಾಜಪೇಯಿ ಬಡಾವಣೆಯನ್ನು ಅದೇ ದಿನ ಲೋಕಾರ್ಪಣೆಗೊಳಿಸಲು ಉದ್ದೇಶಿಸಲಾಗಿದೆ. ಡಿಸೆಂಬರ್ನೊಳಗೆ ಒಳಚರಂಡಿ (ಯಜಿಡಿ) 100 ಕಿ.ಮೀ ಕಾಮಗಾರಿ ಮುಗಿಸಬೇಕು ಎಂದೂ ಸೂಚನೆ ನೀಡಿದ್ದೇನೆ. ಈ ಎಲ್ಲ ಕಾರ್ಯಕ್ರಮಗಳ ಉದ್ಘಾಟನೆ ಮುಖ್ಯಮಂತ್ರಿವರನ್ನು ಆಹ್ವಾನಿಸಲಾಗುವುದು ಎಂದೂ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /><br />ಜಿಲ್ಲೆಯಲ್ಲಿ ಚಿಕ್ಕಮಗಳೂರು ಮತ್ತು ಬೀರೂರು ಹೊರತಾಗಿ ಇತರೆಡೆಗಳಲ್ಲಿ ಒಳಚರಂಡಿ ಸೌಲಭ್ಯ ಇಲ್ಲ।. ಈ ನಿಟ್ಟಿನಲ್ಲಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.<br /><br />ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ಮೇಲ್ಡರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಸ್ತಾವ ಸಲ್ಲಿಕೆಯಾಗಿದ್ದರೆ ಪರಿಶೀಲಿಸಲಾಗುವುದು. ಜನಸಂಖ್ಯೆ, ವಿಸ್ತೀರ್ಣ ಇತ್ಯಾದಿ ಮಾನದಂಡಗಳನ್ನು ಆಧರಿಸಿ ಕ್ರಮ ವಹಿಸಲಾಗುವುದು ಎಂದು ಉತ್ತರಿಸಿದರು.<br /><br />ಹೊರರಾಜ್ಯಗಳ ಗುತ್ತಿಗೆದಾರರಿಗೆ ರಾಜ್ಯದಲ್ಲಿ ಕಾಮಗಾರಿ ಗುತ್ತಿಗೆಗೆ ಅವಕಾಶ ನೀಡದಿರಲು ಚಿಂತನೆ ನಡೆದಿದೆ. ಮುಖ್ಯಮಂತ್ರಿ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಪುರಸಭೆ, ಪಟ್ಟಣ ಪಂಚಾಯಿತಿ, ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ನಿಟ್ಟಿನಲ್ಲಿ ಸಂಪುಟ ಉಪಸಮಿತಿ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಿದೆ ಎಂದರು.<br /><br />ಸರ್ಕಾರ ನಿರ್ಮಿಸುವ ಬಡಾವಣೆಗಳಲ್ಲಿ ಪತ್ರಕರ್ತರಿಗೆ ಶೇ 5ರಷ್ಟು ನಿವೇಶನಗಳನ್ನು ನಿಗದಿಪಡಿಸಲು ತೀರ್ಮಾನ ಕೈಗೊಂಡಿದ್ದೇವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>