ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮನೆಯ ಹಿಂಭಾಗದ ಟಾರ್ಪಾಲ್ ಮತ್ತು ಗೃಹೋಪಯೋಗಿ ವಸ್ತುಗಳು ಸುಟ್ಟು ಹೋಗಿವೆ. ಆಗಸ್ಟ್ 28ರಂದು ಮನ್ಸೂರ್ ಅವರ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಮತ್ತೆ ಬುಧವಾರ ಈ ಕೃತ್ಯ ಎಸಗಿದ್ದಾರೆ. ವಿದ್ಯಾರಣ್ಯಪುರದಲ್ಲಿ ನಾಲ್ಕನೇ ಬಾರಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.