<p><strong>ಚಿಕ್ಕಮಗಳೂರು:</strong> ಕಾಫಿನಾಡಿನ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ನ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಅವರು ಆರು ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಅತ್ಯಂತ ಪ್ರಯಾಸದ ಗೆಲುವು ಸಾಧಿಸಿದ್ದಾರೆ.</p>.<p>ಕಾಂಗ್ರೆಸ್ನ ಅಭ್ಯರ್ಥಿ ಎ।.ವಿ. ಗಾಯತ್ರಿ ಶಾಂತೇಗೌಡ ಅವರು ಕೂದಲೆಳೆ ಅಂತರದಲ್ಲಿ ಪರಾಜಿತರಾಗಿದ್ದಾರೆ. 400 ಹೆಚ್ಚು ಮತಗಳ ಅಂತರದಲ್ಲಿ ಗೆಲುವು ದಾಖಲಿಸುತ್ತೇವೆ ಎಂಬ ಬಿಜೆಪಿ ನಾಯಕರ ‘ಅತಿ ವಿಶ್ವಾಸ’ದ ಲೆಕ್ಕಾಚಾರ ಹುಸಿಯಾಗಿದೆ.</p>.<p>ಈ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಪ್ರಾಣೇಶ್ ಮತ್ತು ಗಾಯತ್ರಿ ಇಬ್ಬರೂ ರಾಜಕಾರಣದಲ್ಲಿ ಪಳಗಿದವರೇ. ಎದುರಾಳಿಯ ತಂತ್ರಕ್ಕೆ ಪ್ರತಿತಂತ್ರ ರೂಪಿಸುವುದರಲ್ಲಿ ಇಬ್ಬರೂ ನಿಸ್ಸೀಮರು.</p>.<p>ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು1400ಕ್ಕೂ ಹೆಚ್ಚು ಮಂದಿ ಇದ್ದಾರೆ ಎಂಬುದು ಆ ಪಕ್ಷದ ಲೆಕ್ಕಾಚಾರವಾಗಿತ್ತು. ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಶಾಸಕರು ಇದ್ದಾರೆ. ಸಂಸದರು ಬಿಜೆಪಿಯವರೇ. ಈ ಚುನಾವಣೆಯಲ್ಲಿ ಅನಾಯಾಸವಾಗಿ ಬಿಜೆಪಿ ಅಭ್ಯರ್ಥಿ ಗೆಲ್ಲುತ್ತಾರೆ ಎಂಬ ಲೆಕ್ಕ ಬಿಜೆಪಿಯದಾಗಿತ್ತು.</p>.<p>ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಅವರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಒಮ್ಮೆ ಗೆದ್ದ ಮತ್ತು ಒಮ್ಮೆ ಸೋತ ಅನುಭವ ಇತ್ತು. ಕಾಂಗ್ರೆಸ್ ಪಕ್ಷದ ಮುಖಂಡರು ಎಲ್ಲರೂ ಒಗ್ಗೂಡಿ ಅವರ ಬೆನ್ನಿಗೆ ನಿಂತಿದ್ದರು.</p>.<p>ಜೆಡಿಎಸ್ ಕಣದಿಂದ ದೂರ ಉಳಿದಿತ್ತು. ಪಕ್ಷದ ಬೆಂಬಲ ಇಂಥವರಿಗೆ ಎಂದು ಪ್ರಕಟಿಸಲೇ ಇಲ್ಲ. ಜೆಡಿಎಸ್ ತಟಸ್ಥ ನಿಲುವಿನ ಪ್ರಯೋಜನವನ್ನು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಪಡೆದವು.</p>.<p>ಕಾಂಗ್ರೆಸ್ ಮತ್ತು ಬಿಜೆಪಿ ಎರಡಕ್ಕೂ ಈ ಕ್ಷೇತ್ರವು ಪ್ರತಿಷ್ಠೆಯ ಕಣವಾಗಿತ್ತು. ಮತದಾರರ ನಾಡಿಮಿಡಿತ ಹಿಡಿಯುವ ನಿಟ್ಟಿನಲ್ಲಿ ಎರಡೂ ಪಕ್ಷಗಳವರು ‘ಸೇರು –ಸವ್ವಾ ಸೇರು’ ಅಸ್ತ್ರ ಪ್ರಯೋಗಿಸಿದರು.</p>.<p>‘ಒಳ ಏಟು’ ಬೀಳಲ್ಲ, ಪಕ್ಷದಲ್ಲಿ ‘ಅಸಮಾಧಾನ’, ‘ಅತೃಪ್ತಿ’ ಇಲ್ಲ ಎಂಬುದು ಬಿಜೆಪಿಯ ಬಲವಾದ ನಂಬಿಕೆಯಾಗಿತ್ತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಡೆದ ಮತಗಳು ಮತ್ತು ನೀಡಿದ ಬಹುತೇಕ ಸಮಬಲದ ಪೈಪೋಟಿಯು ಬಿಜೆಪಿಗೆ ಎದುರಾಳಿ ಪಕ್ಷದ (ಕಾಂಗ್ರೆಸ್) ಸಾಮರ್ಥ್ಯದ ಅರಿವು ಮೂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಕಾಫಿನಾಡಿನ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ನ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಅವರು ಆರು ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಅತ್ಯಂತ ಪ್ರಯಾಸದ ಗೆಲುವು ಸಾಧಿಸಿದ್ದಾರೆ.</p>.<p>ಕಾಂಗ್ರೆಸ್ನ ಅಭ್ಯರ್ಥಿ ಎ।.ವಿ. ಗಾಯತ್ರಿ ಶಾಂತೇಗೌಡ ಅವರು ಕೂದಲೆಳೆ ಅಂತರದಲ್ಲಿ ಪರಾಜಿತರಾಗಿದ್ದಾರೆ. 400 ಹೆಚ್ಚು ಮತಗಳ ಅಂತರದಲ್ಲಿ ಗೆಲುವು ದಾಖಲಿಸುತ್ತೇವೆ ಎಂಬ ಬಿಜೆಪಿ ನಾಯಕರ ‘ಅತಿ ವಿಶ್ವಾಸ’ದ ಲೆಕ್ಕಾಚಾರ ಹುಸಿಯಾಗಿದೆ.</p>.<p>ಈ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಪ್ರಾಣೇಶ್ ಮತ್ತು ಗಾಯತ್ರಿ ಇಬ್ಬರೂ ರಾಜಕಾರಣದಲ್ಲಿ ಪಳಗಿದವರೇ. ಎದುರಾಳಿಯ ತಂತ್ರಕ್ಕೆ ಪ್ರತಿತಂತ್ರ ರೂಪಿಸುವುದರಲ್ಲಿ ಇಬ್ಬರೂ ನಿಸ್ಸೀಮರು.</p>.<p>ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು1400ಕ್ಕೂ ಹೆಚ್ಚು ಮಂದಿ ಇದ್ದಾರೆ ಎಂಬುದು ಆ ಪಕ್ಷದ ಲೆಕ್ಕಾಚಾರವಾಗಿತ್ತು. ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಶಾಸಕರು ಇದ್ದಾರೆ. ಸಂಸದರು ಬಿಜೆಪಿಯವರೇ. ಈ ಚುನಾವಣೆಯಲ್ಲಿ ಅನಾಯಾಸವಾಗಿ ಬಿಜೆಪಿ ಅಭ್ಯರ್ಥಿ ಗೆಲ್ಲುತ್ತಾರೆ ಎಂಬ ಲೆಕ್ಕ ಬಿಜೆಪಿಯದಾಗಿತ್ತು.</p>.<p>ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಅವರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಒಮ್ಮೆ ಗೆದ್ದ ಮತ್ತು ಒಮ್ಮೆ ಸೋತ ಅನುಭವ ಇತ್ತು. ಕಾಂಗ್ರೆಸ್ ಪಕ್ಷದ ಮುಖಂಡರು ಎಲ್ಲರೂ ಒಗ್ಗೂಡಿ ಅವರ ಬೆನ್ನಿಗೆ ನಿಂತಿದ್ದರು.</p>.<p>ಜೆಡಿಎಸ್ ಕಣದಿಂದ ದೂರ ಉಳಿದಿತ್ತು. ಪಕ್ಷದ ಬೆಂಬಲ ಇಂಥವರಿಗೆ ಎಂದು ಪ್ರಕಟಿಸಲೇ ಇಲ್ಲ. ಜೆಡಿಎಸ್ ತಟಸ್ಥ ನಿಲುವಿನ ಪ್ರಯೋಜನವನ್ನು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಪಡೆದವು.</p>.<p>ಕಾಂಗ್ರೆಸ್ ಮತ್ತು ಬಿಜೆಪಿ ಎರಡಕ್ಕೂ ಈ ಕ್ಷೇತ್ರವು ಪ್ರತಿಷ್ಠೆಯ ಕಣವಾಗಿತ್ತು. ಮತದಾರರ ನಾಡಿಮಿಡಿತ ಹಿಡಿಯುವ ನಿಟ್ಟಿನಲ್ಲಿ ಎರಡೂ ಪಕ್ಷಗಳವರು ‘ಸೇರು –ಸವ್ವಾ ಸೇರು’ ಅಸ್ತ್ರ ಪ್ರಯೋಗಿಸಿದರು.</p>.<p>‘ಒಳ ಏಟು’ ಬೀಳಲ್ಲ, ಪಕ್ಷದಲ್ಲಿ ‘ಅಸಮಾಧಾನ’, ‘ಅತೃಪ್ತಿ’ ಇಲ್ಲ ಎಂಬುದು ಬಿಜೆಪಿಯ ಬಲವಾದ ನಂಬಿಕೆಯಾಗಿತ್ತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಡೆದ ಮತಗಳು ಮತ್ತು ನೀಡಿದ ಬಹುತೇಕ ಸಮಬಲದ ಪೈಪೋಟಿಯು ಬಿಜೆಪಿಗೆ ಎದುರಾಳಿ ಪಕ್ಷದ (ಕಾಂಗ್ರೆಸ್) ಸಾಮರ್ಥ್ಯದ ಅರಿವು ಮೂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>