ಈ ಬಗ್ಗೆ ‘ಪ್ರಜಾವಾಣಿ’ ತಾಲ್ಲೂಕು ವೈದ್ಯಾಧಿಕಾರಿ ಡಾ.ವೀರಪ್ರಸಾದ್ ಅವರನ್ನು ಸಂಪರ್ಕಿಸಿದಾಗ, ‘ಇದುವರೆಗೆ ಒಟ್ಟು 5 ಮಂದಿಗೆ ಮಂಗನ ಕಾಯಿಲೆ ದೃಢಪಟ್ಟಿದೆ. ಈ ಪೈಕಿ ಹೊರ ರಾಜ್ಯದಿಂದ ಬಂದಿದ್ದ ಇಬ್ಬರು ಕಾರ್ಮಿಕರು ಅವರ ಊರಿಗೆ ತೆರಳಿದ್ದಾರೆ. ಉಳಿದ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎಸ್ಟೇಟ್ನ ಎಲ್ಲಾ ಕಾರ್ಮಿಕರು ಕೆಎಫ್ಡಿ ನಿರೋಧಕ ಲಸಿಕೆ ನೀಡಲಾಗಿದೆ. ಗುರುವಾರ ಮಡಬೂರು ಗ್ರಾಮದ 5 ಕಿ.ಮೀ ವ್ಯಾಪ್ತಿಯಲ್ಲಿನ ಗ್ರಾಮಸ್ಥರಿಗೆ ಕೆಎಫ್ಡಿ ನಿರೋಧಕ ಲಸಿಕೆ ನೀಡುವ ಬಗ್ಗೆ ವ್ಯಾಪಕ ಪ್ರಚಾರ ಮಾಡಲಾಗಿದೆ. ಇದೇ 14ರಂದು ಗ್ರಾಮಸ್ಥರಿಗೆ ಲಸಿಕೆ ನೀಡಲಾಗುವುದು’ ಎಂದು ಮಾಹಿತಿ ನೀಡಿದರು.