ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗೋಣಿಬೀಡು: ವ್ಯಕ್ತಿ ಆತ್ಮಹತ್ಯೆ

Published 28 ಮೇ 2024, 14:23 IST
Last Updated 28 ಮೇ 2024, 14:23 IST
ಅಕ್ಷರ ಗಾತ್ರ

ಮೂಡಿಗೆರೆ: ತಾಲ್ಲೂಕಿನ ಗೋಣಿಬೀಡು ಪೊಲೀಸ್ ಠಾಣೆ ವ್ಯಾಪ್ತಿಯ ಅಗ್ರಹಾರ ರಸ್ತೆಯ ನಿವಾಸಿ ಭಾಸ್ಕರ ಶಾಸ್ತ್ರಿ (70) ತಮ್ಮ ಮನೆಯಲ್ಲಿ ಮಂಗಳವಾರ ಬೆಳಗಿನ ಜಾವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿಡಗೋಡು ಗ್ರಾಮದ ದೇವಾಲಯದಲ್ಲಿ ಅರ್ಚಕರಾಗಿದ್ದ ಅವರು, ಪೌರೋಹಿತ್ಯ ಕಾರ್ಯ ನಡೆಸುತ್ತಿದ್ದರು. ಅವರಿಗೆ ಇಬ್ಬರು ಪುತ್ರಿಯರಿದ್ದು, ಮಹತ್ಮಾಗಾಂಧಿ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಶವ ಹಸ್ತಾಂತರಿಸಲಾಯಿತು.

ಸಂಜೆ ಗೋಣಿಬೀಡಿನಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT