<p>ಮೂಡಿಗೆರೆ: ಭೀಮಾ ಕೋರೆಗಾಂವ್ ಆಚರಣೆ ಸಂಘದ ವತಿಯಿಂದ ಏ. 24ರಂದು ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಚರಿಸಲಾಗುವುದು ಎಂದು ಸಂಘದ ಅಧ್ಯಕ್ಷ ಸುಂದ್ರೇಶ್ ಕನ್ನಾಪುರ ಹೇಳಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂಬೇಡ್ಕರ್ ಜಯಂತಿ ಒಂದು ಸ್ಮರಣೆಯ ದಿನವಲ್ಲ. ಬದಲಾಗಿ ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಪಸರಿಸುವ ಮಹತ್ವದ ದಿನವಾಗಿದೆ. ಹಾಗಾಗಿ ನಮ್ಮ ಸಂಘದಿಂದ ಅದ್ದೂರಿಯಾಗಿ ಅಂಬೇಡ್ಕರ್ ಜಯಂತ್ಯುತ್ಸವ ಆಚರಿಸಲು ಸಿದ್ಧತೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಏ. 17ರಂದು ಬೆಳಿಗ್ಗೆ 11ಕ್ಕೆ ಕೊಲ್ಲಿಬೈಲ್ನಿಂದ ಹ್ಯಾಂಡ್ಪೋಸ್ಟ್ ಸರ್ಕಲ್ವರೆಗೆ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>ಕಾರ್ಯದರ್ಶಿ ಸುಂದ್ರೇಶ್ ಹೊಯ್ಸಳಲು, ಖಜಾಂಚಿ ಭಾನುಪ್ರಕಾಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-126-1907239444</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೂಡಿಗೆರೆ: ಭೀಮಾ ಕೋರೆಗಾಂವ್ ಆಚರಣೆ ಸಂಘದ ವತಿಯಿಂದ ಏ. 24ರಂದು ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಚರಿಸಲಾಗುವುದು ಎಂದು ಸಂಘದ ಅಧ್ಯಕ್ಷ ಸುಂದ್ರೇಶ್ ಕನ್ನಾಪುರ ಹೇಳಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂಬೇಡ್ಕರ್ ಜಯಂತಿ ಒಂದು ಸ್ಮರಣೆಯ ದಿನವಲ್ಲ. ಬದಲಾಗಿ ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಪಸರಿಸುವ ಮಹತ್ವದ ದಿನವಾಗಿದೆ. ಹಾಗಾಗಿ ನಮ್ಮ ಸಂಘದಿಂದ ಅದ್ದೂರಿಯಾಗಿ ಅಂಬೇಡ್ಕರ್ ಜಯಂತ್ಯುತ್ಸವ ಆಚರಿಸಲು ಸಿದ್ಧತೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಏ. 17ರಂದು ಬೆಳಿಗ್ಗೆ 11ಕ್ಕೆ ಕೊಲ್ಲಿಬೈಲ್ನಿಂದ ಹ್ಯಾಂಡ್ಪೋಸ್ಟ್ ಸರ್ಕಲ್ವರೆಗೆ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>ಕಾರ್ಯದರ್ಶಿ ಸುಂದ್ರೇಶ್ ಹೊಯ್ಸಳಲು, ಖಜಾಂಚಿ ಭಾನುಪ್ರಕಾಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-126-1907239444</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>