<p>ಮೂಡಿಗೆರೆ: ಪಟ್ಟಣದ ಕೊಲ್ಲಿಬೈಲ್ ಗ್ರಾಮದ ಕೆ.ಎಂ. ರಸ್ತೆಯ ಸಿದ್ದಾರ್ಥವನದ ಬಳಿ ಗುರುವಾರ ತಡರಾತ್ರಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ, ಲಕ್ಷಾಂತರ ಮೌಲ್ಯದ ಮರವನ್ನು ವಶಕ್ಕೆ ಪಡೆದಿದ್ದಾರೆ.</p>.<p>8 ಗಂಟೆಗೆ ಮೂಡಿಗೆರೆಯಿಂದ ಚಿಕ್ಕಮಗಳೂರಿನ ಕಡೆಗೆ ಹಲಸಿನ ಮರವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದಿದ್ದು, ರಾತ್ರಿ 8 ಗಂಟೆಯಿಂದಲೂ ಸಿದ್ದಾರ್ಥವನದ ಬಳಿ ನಾಕಾಬಂದಿ ಇರಿಸಿ ವಾಹನಗಳ ತಪಾಸಣೆ ನಡೆಸಿದ್ದು, ಈ ವೇಳೆ ಹೆದ್ದಾರಿಯಲ್ಲಿ ಬಂದ KA-46-6177 ಸಂಖ್ಯೆಯ ಬೊಲೆರೋ ಪಿಕಪ್ ವಾಹನವನ್ನು ತಪಾಸಣೆ ಮಾಡಿದಾಗ ಪರವಾನಗಿ ಇಲ್ಲದೇ 45 ಹಲಸಿನ ಸೈಜುಗಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ.</p>.<p>ಕೂಡಲೇ ಆರೋಪಿಗಳಾದ ಹಳೇ ಮೂಡಿಗೆರೆಯ ಶಿವಪ್ಪ ಹಾಗೂ ಗುತ್ತಿಯ ವಿಕ್ರಂ ಎಂಬುವರನ್ನು ವಶಕ್ಕೆ ಪಡೆದು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.</p>.<p>ಡಿಸಿಎಫ್ ರಮೇಶ್ ಬಾಬು ಹಾಗೂ ಎಸಿಎಫ್ ಆಕರ್ಷ್ ಅವರ ಮಾರ್ಗದರ್ಶನದಲ್ಲಿ, ನಡೆದ ಕಾರ್ಯಾಚರಣೆಯಲ್ಲಿ ಆರ್ಎಫ್ಒ ಮಂಜುನಾಥ್ ಜಿ. ನೇತೃತ್ವ ವಹಿಸಿದ್ದರು. ಡಿಆರ್ಎಫ್ಒ ಅಶ್ವತ್ಥ್ ಬಗಲಿ, ಬೀಟ್ ಫಾರೆಸ್ಟರ್ಗಳಾದ ಪರಮೇಶ್, ಸುರೇಶ್, ವಾಚರ್ ಉದಯ್ ಹಾಗೂ ವಾಹನ ಚಾಲಕರಾದ ಸುಮಂತ್, ನವರಾಜ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-126-1040537743</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೂಡಿಗೆರೆ: ಪಟ್ಟಣದ ಕೊಲ್ಲಿಬೈಲ್ ಗ್ರಾಮದ ಕೆ.ಎಂ. ರಸ್ತೆಯ ಸಿದ್ದಾರ್ಥವನದ ಬಳಿ ಗುರುವಾರ ತಡರಾತ್ರಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ, ಲಕ್ಷಾಂತರ ಮೌಲ್ಯದ ಮರವನ್ನು ವಶಕ್ಕೆ ಪಡೆದಿದ್ದಾರೆ.</p>.<p>8 ಗಂಟೆಗೆ ಮೂಡಿಗೆರೆಯಿಂದ ಚಿಕ್ಕಮಗಳೂರಿನ ಕಡೆಗೆ ಹಲಸಿನ ಮರವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದಿದ್ದು, ರಾತ್ರಿ 8 ಗಂಟೆಯಿಂದಲೂ ಸಿದ್ದಾರ್ಥವನದ ಬಳಿ ನಾಕಾಬಂದಿ ಇರಿಸಿ ವಾಹನಗಳ ತಪಾಸಣೆ ನಡೆಸಿದ್ದು, ಈ ವೇಳೆ ಹೆದ್ದಾರಿಯಲ್ಲಿ ಬಂದ KA-46-6177 ಸಂಖ್ಯೆಯ ಬೊಲೆರೋ ಪಿಕಪ್ ವಾಹನವನ್ನು ತಪಾಸಣೆ ಮಾಡಿದಾಗ ಪರವಾನಗಿ ಇಲ್ಲದೇ 45 ಹಲಸಿನ ಸೈಜುಗಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ.</p>.<p>ಕೂಡಲೇ ಆರೋಪಿಗಳಾದ ಹಳೇ ಮೂಡಿಗೆರೆಯ ಶಿವಪ್ಪ ಹಾಗೂ ಗುತ್ತಿಯ ವಿಕ್ರಂ ಎಂಬುವರನ್ನು ವಶಕ್ಕೆ ಪಡೆದು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.</p>.<p>ಡಿಸಿಎಫ್ ರಮೇಶ್ ಬಾಬು ಹಾಗೂ ಎಸಿಎಫ್ ಆಕರ್ಷ್ ಅವರ ಮಾರ್ಗದರ್ಶನದಲ್ಲಿ, ನಡೆದ ಕಾರ್ಯಾಚರಣೆಯಲ್ಲಿ ಆರ್ಎಫ್ಒ ಮಂಜುನಾಥ್ ಜಿ. ನೇತೃತ್ವ ವಹಿಸಿದ್ದರು. ಡಿಆರ್ಎಫ್ಒ ಅಶ್ವತ್ಥ್ ಬಗಲಿ, ಬೀಟ್ ಫಾರೆಸ್ಟರ್ಗಳಾದ ಪರಮೇಶ್, ಸುರೇಶ್, ವಾಚರ್ ಉದಯ್ ಹಾಗೂ ವಾಹನ ಚಾಲಕರಾದ ಸುಮಂತ್, ನವರಾಜ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-126-1040537743</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>