‘ಗ್ರಾಮೀಣ ಭಾಗದಲ್ಲಿ ಉತ್ಕೃಷ್ಟ ಪ್ರತಿಭೆಗಳಿದ್ದು, ಅವರನ್ನು ಪ್ರೋತ್ಸಾಹಿಸುವ ಸಲುವಾಗಿ ನಮ್ಮ ಸರ್ಕಾರವು ಈ ಬಾರಿ ಇಲಾಖೆ ಮೂಲಕ ಗ್ರಾಮೀಣ ಕ್ರೀಡಾಕೂಟವನ್ನು ಆಯೋಜಿಸಿದೆ. ಪ್ರತಿ ಗ್ರಾಮದಿಂದಲೂ ಕ್ರೀಡಾಪಟುಗಳನ್ನು ಅನ್ವೇಷಿಸಲಾಗಿದೆ. ಇದು ರಾಜ್ಯ ಮಟ್ಟದವರೆಗೂ ತಲುಪಲಿದ್ದು, ಪ್ರತಿ ಕ್ರೀಡಾಪಟು ಅವಿರತವಾಗಿ ಗೆಲುವಿಗೆ ಶ್ರಮಿಸಬೇಕು. ಕ್ರೀಡೆಯಲ್ಲಿ ಸೋಲು, ಗೆಲುವು ನಿಶ್ಚಿತವಾಗಿರುವುದರಿಂದ ಸೋಲಿಗೆ ಎದೆಗುಂದದೆ ನಿರಂತರ ಪ್ರಯತ್ನ ನಡೆಸಬೇಕು’ ಎಂದರು.