ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸೂರಪ್ಪ ನೇಮಕ ರಾಜಕೀಯ ಬೇಡ’

Last Updated 7 ಏಪ್ರಿಲ್ 2018, 19:44 IST
ಅಕ್ಷರ ಗಾತ್ರ

ಚೆನ್ನೈ: ಅಣ್ಣಾ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಡಾ. ಎಂ.ಕೆ. ಸೂರಪ್ಪ ಅವರ ನೇಮಕದಲ್ಲಿ ‘ಪಾರದರ್ಶಕ ಹಾಗೂ ನ್ಯಾಯಯುತ’ ಪ್ರಕ್ರಿಯೆ ಅನುಸರಿಸಲಾಗಿದೆ ಎಂದು ರಾಜಭವನ ಶನಿವಾರ ಸ್ಪಷ್ಟನೆ ನೀಡಿದೆ.

ಅಣ್ಣಾ ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ನೇಮಕಾತಿ ಕುರಿತು ಯಾವುದೇ ರೀತಿಯ ರಾಜಕೀಯ ಮಾಡದಂತೆ ರಾಜಭವನ ಮನವಿ ಮಾಡಿದೆ.

ತಮಿಳುನಾಡು ರಾಜ್ಯಪಾಲ ಬನವಾರಿಲಾಲ್ ಪುರೋಹಿತ್ ಅವರು ಕನ್ನಡಿಗ ಸೂರಪ್ಪ ಅವರನ್ನು ಕುಲಪತಿ ಹುದ್ದೆಗೆ ನೇಮಕಗೊಳಿಸಿದ ಬಳಿಕ ತಮಿಳುನಾಡಿನ ವಿರೋಧ ಪಕ್ಷಗಳು ಸಾಕಷ್ಟು ಟೀಕೆ ವ್ಯಕ್ತಪಡಿಸಿದ್ದವು. ಹೀಗಾಗಿ ರಾಜಭವನ ಈ ಸ್ಪಷ್ಟನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT