ತಾಲ್ಲೂಕಿನ ವ್ಯಾಪ್ತಿಯ ಕಡಹಿನಬೈಲು ಮಡಬೂರು ಮತ್ತಿತರ ಗ್ರಾಮಗಳಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಳೆಗಾಲದ ಸಂದರ್ಭದಲ್ಲಿ ಸಾಕಷ್ಟು ಹಾನಿಯಾಗಿತ್ತು. ಮಲೆನಾಡು ಭಾಗದಲ್ಲಿ ಇದು ಸಾಮಾನ್ಯ ಸಂಗತಿ. ಆರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲಿಸಿದ್ದರು. ಆದರೆ ಅತಿವೃಷ್ಟಿಯಿಂದ ಹಾನಿಗೊಳಾದ ಪ್ರದೇಶದ ಅಭಿವೃದ್ಧಿಗೆ ಬಿಡಿಕಾಸನ್ನು ನೀಡಲಿಲ್ಲ ಎಂದು ರಾಜೇಗೌಡ ದೂರಿದರು. ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬಿಜೆಪಿಯವರು ಟೀಕೆ ಮಾಡುವ ರಾಜಕಾರಣ ಬಿಟ್ಟು ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಿ ಎಂದು ಆಗ್ರಹಿಸಿದರು.