<p><strong>ಚಿಕ್ಕಮಗಳೂರು:</strong> ಅರಣ್ಯ ಕಾಯ್ದೆಯ ಸೆಕ್ಷನ್ 4 ಮತ್ತು ಸೆಕ್ಷನ್ 17 ಮಲೆನಾಡು ಜನರ ನಿದ್ರೆಗೆಡಿಸಿವೆ. ರಾಜ್ಯ ಸರ್ಕಾರ ಈ ಸೆಕ್ಷನ್ಗಳನ್ನು ರದ್ದುಗೊಳಿಸಬೇಕು ಎಂದು ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಆಗ್ರಹಿಸಿದರು.</p>.<p>‘ಅರಣ್ಯ ಕಾಯ್ದೆಗಳಿಂದ ಸಾಕಷ್ಟು ಕಂದಾಯ ಭೂಮಿ ಕಡಿಮೆಯಾಗುತ್ತಿದೆ. ಬಡವರಿಗೆ ನಿವೇಶನ ನೀಡಲು ಸಾಧ್ಯವಾಗುತ್ತಿಲ್ಲ. ಸೆಕ್ಷನ್ 4 ಅಡಿಯಲ್ಲಿ ಅರಣ್ಯ ವ್ಯವಸ್ಥಾಪನ ಅಧಿಕಾರಿ(ಎಫ್ಎಸ್ಒ) ರೈತರಿಗೆ ನೋಟಿಸ್ ಜಾರಿ ಮಾಡುತ್ತಿದ್ದಾರೆ. ಮನೆಗಳಿಗೆ ಆಧಾರ ಕೇಳುತ್ತಿದ್ದಾರೆ. ಮಲೆನಾಡಿನಲ್ಲಿ ಬಹುತೇಕ ಮನೆಗಳಿಗೆ ಆಧಾರವೇ ಇಲ್ಲವಾಗಿದ್ದು, ಎಲ್ಲಿಂದ ಒದಗಿಸುವುದು’ ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಪ್ರಶ್ನಿಸಿದರು.</p>.<p>ಪರಿಭಾವಿತ ಅರಣ್ಯವನ್ನು ಮೀಸಲು ಅರಣ್ಯವಾಗಿ ಘೋಷಿಸದಂತೆ ಒತ್ತಡ ಹಾಕಲಾಗುತ್ತಿದೆ. ನಮೂನೆ 53 ಮತ್ತು 57ರಲ್ಲಿ ಅರ್ಜಿ ಸಲ್ಲಿಸಿದವರು ಅರಣ್ಯ ಕಾಯ್ದೆಯ ಕಾರಣಕ್ಕೆ ಹಕ್ಕುಪತ್ರ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದರು.</p>.<p>ಸೆಕ್ಷನ್ 17 ಮತ್ತು ಸೆಕ್ಷನ್ 4 ರದ್ದುಪಡಿಸದಿದ್ದರೆ ಸರ್ಕಾರವೇ ಜನರನ್ನು ಬೀದಿಗೆ ತಳ್ಳಿದಂತೆ ಆಗಲಿದೆ. ಎರಡು ಕಾಯ್ದೆಗಳಿಂದ ಮಲೆನಾಡಿನ ಜನರಿಗೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ಗೆ ಮನವರಿಕೆ ಮಾಡಿಕೊಡುವ ಕೆಲಸವನ್ನು ಸರ್ಕಾರ ಮಾಡಬೇಕು. ಈ ಎರಡು ಸೆಕ್ಷನ್ ರದ್ದುಪಡಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಹುಣಸೆಮಕ್ಕಿ ಲಕ್ಷ್ಮಣ್, ಛಲವಾದಿ ರಘು, ರೈತ ಗಣೇಶ್ಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಅರಣ್ಯ ಕಾಯ್ದೆಯ ಸೆಕ್ಷನ್ 4 ಮತ್ತು ಸೆಕ್ಷನ್ 17 ಮಲೆನಾಡು ಜನರ ನಿದ್ರೆಗೆಡಿಸಿವೆ. ರಾಜ್ಯ ಸರ್ಕಾರ ಈ ಸೆಕ್ಷನ್ಗಳನ್ನು ರದ್ದುಗೊಳಿಸಬೇಕು ಎಂದು ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಆಗ್ರಹಿಸಿದರು.</p>.<p>‘ಅರಣ್ಯ ಕಾಯ್ದೆಗಳಿಂದ ಸಾಕಷ್ಟು ಕಂದಾಯ ಭೂಮಿ ಕಡಿಮೆಯಾಗುತ್ತಿದೆ. ಬಡವರಿಗೆ ನಿವೇಶನ ನೀಡಲು ಸಾಧ್ಯವಾಗುತ್ತಿಲ್ಲ. ಸೆಕ್ಷನ್ 4 ಅಡಿಯಲ್ಲಿ ಅರಣ್ಯ ವ್ಯವಸ್ಥಾಪನ ಅಧಿಕಾರಿ(ಎಫ್ಎಸ್ಒ) ರೈತರಿಗೆ ನೋಟಿಸ್ ಜಾರಿ ಮಾಡುತ್ತಿದ್ದಾರೆ. ಮನೆಗಳಿಗೆ ಆಧಾರ ಕೇಳುತ್ತಿದ್ದಾರೆ. ಮಲೆನಾಡಿನಲ್ಲಿ ಬಹುತೇಕ ಮನೆಗಳಿಗೆ ಆಧಾರವೇ ಇಲ್ಲವಾಗಿದ್ದು, ಎಲ್ಲಿಂದ ಒದಗಿಸುವುದು’ ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಪ್ರಶ್ನಿಸಿದರು.</p>.<p>ಪರಿಭಾವಿತ ಅರಣ್ಯವನ್ನು ಮೀಸಲು ಅರಣ್ಯವಾಗಿ ಘೋಷಿಸದಂತೆ ಒತ್ತಡ ಹಾಕಲಾಗುತ್ತಿದೆ. ನಮೂನೆ 53 ಮತ್ತು 57ರಲ್ಲಿ ಅರ್ಜಿ ಸಲ್ಲಿಸಿದವರು ಅರಣ್ಯ ಕಾಯ್ದೆಯ ಕಾರಣಕ್ಕೆ ಹಕ್ಕುಪತ್ರ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದರು.</p>.<p>ಸೆಕ್ಷನ್ 17 ಮತ್ತು ಸೆಕ್ಷನ್ 4 ರದ್ದುಪಡಿಸದಿದ್ದರೆ ಸರ್ಕಾರವೇ ಜನರನ್ನು ಬೀದಿಗೆ ತಳ್ಳಿದಂತೆ ಆಗಲಿದೆ. ಎರಡು ಕಾಯ್ದೆಗಳಿಂದ ಮಲೆನಾಡಿನ ಜನರಿಗೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ಗೆ ಮನವರಿಕೆ ಮಾಡಿಕೊಡುವ ಕೆಲಸವನ್ನು ಸರ್ಕಾರ ಮಾಡಬೇಕು. ಈ ಎರಡು ಸೆಕ್ಷನ್ ರದ್ದುಪಡಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಹುಣಸೆಮಕ್ಕಿ ಲಕ್ಷ್ಮಣ್, ಛಲವಾದಿ ರಘು, ರೈತ ಗಣೇಶ್ಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>