ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ 2022 ಮೇ 10ರಂದು ತಮ್ಮೊಂದಿಗೆ ನಡೆಸಿದ ದೂರವಾಣಿ ಸಂಭಾಷಣೆಯಂತೆ ನನ್ನ ಮತ ಕ್ಷೇತ್ರ ವ್ಯಾಪ್ತಿಯಲ್ಲಿನ ಎಲ್ಲ ಪೊಲೀಸ್ ಠಾಣೆಗಳ ಎಲ್ಲ ಪಿಎಸ್ಐಗಳನ್ನು ಉಲ್ಲೇಖ (1)ರಂತೆ ಕೇಂದ್ರ ಸ್ಥಾನದಲ್ಲಿಯೇ ಮುಂದುವರಿಸುವಂತೆ ನನ್ನ ಇ–ಮೇಲ್ ಮೂಲಕ ಕೋರಲಾಗಿತ್ತು. ಆದರೂ, ತಾವು ನನ್ನ ಗಮನಕ್ಕೆ ತರದೆ ನನ್ನ ಮತ್ರ ಕ್ಷೇತ್ರದ ಮೂಡಿಗರೆ ಠಾಣೆಯ ಪಿಎಸ್ಐ ರವಿ ಹಾಗೂ ಮಲ್ಲಂದೂರು ಠಾಣೆಯ ಪಿಎಸ್ಐ ಅವರನ್ನು ಬೇರೆಡೆಗೆ ಸ್ಥಳ ನಿಯುಕ್ತಿ ಮಾಡಿ ಆದೇಶ ಹೊರಡಿಸಿದ್ದೀರಿ. ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಈಗ ಮಾಡಿರುವ ಆದೇಶವನ್ನು ಹಿಂಪಡೆದು ಮೂಡಿಗೆರೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್ ಅವರನ್ನು ಕೇಂದ್ರ ಸ್ಥಾನದಲ್ಲೇ ಮುಂದುವರಿಸಬೇಕು. ಹಾಗೂ ಮಲ್ಲಂದೂರು ಠಾಣೆಯ ಪಿಎಸ್ಐ ಸ್ಥಳ ನಿಯುಕ್ತಿ ಆದೇಶ ರದ್ದುಪಡಿಸಬೇಕು ಎಂದು ಕೋರಿಕೊಳ್ಳುತ್ತೇನೆ. ಒಂದು ವೇಳೆ ತಾವು ತಮ್ಮ ಆದೇಶವನ್ನು ವಾರದೊಳಗೆ ಹಿಂಪಡೆಯಲು ಸಾಧ್ಯವಾಗದಿದ್ದರೆ ಸದರಿ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಕಚೇರಿ ಮುಂದೆ ಧರಣಿ ಕೂರುವುದಾಗಿ ಈ ಮೂಲಕ ತಿಳಿಯಪಡಿಸುತ್ತೇನೆ.