<p><strong>ಚಿಕ್ಕಮಗಳೂರು</strong>: ಮೂಡಿಗೆರೆ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಗದ್ದಲ ನಡೆದಿದೆ. ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗಫೂರ್, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದ ಸ್ವಾಮಿ ಸಭೆಯಲ್ಲಿ ಇದ್ದರು. ಪಕ್ಷದ ಎಂ.ಎಲ್.ಅಭಿಜಿತ್, ಅಶೋಕ್ ಆಲ್ದೂರು ಮೊದಲಾವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಮುಂಬರುವ ವಿಧಾನಸಭೆ ಚುನಾವಣೆಗೆ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಕುರಿತು ಪಕ್ಷದ ಅಭಿಪ್ರಾಯ ಸಂಗ್ರಹ ಸಭೆ ನಡೆಯಿತು. ಆ ಪಟ್ಟಿಯಲ್ಲಿ ಕೆಲ ಮುಖಂಡರ ಹೆಸರನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿತ್ತು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆವು, ಹೊಸದಾದ ಪಟ್ಟಿ ಮಾಡಿಕೊಂಡಿದ್ದಾರೆ’ ಎಂದು ಅಭಿಜಿತ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ನಯನಾ ಮೋಟಮ್ಮ ವಿರುದ್ಧವಾಗಿರುವ ಮುಖಂಡರ ಹೆಸರುಗಳನ್ನು ಪಟ್ಟಿಯಲ್ಲಿ ಕೈಬಿಟ್ಟಿದ್ದರು. ನಯನಾ ಅವರಿಗೆ ಟಿಕೆಟ್ ನೀಡಬಾರದು ಎಂದು ಮನವಿ ಮಾಡಿದ್ದೇವೆ’ ಎಂದು ಅವರು ತಿಳಿಸಿದರು.</p>.<p>‘ಸಭೆಯಲ್ಲಿ ಕೆಲವರು ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಅವರ ಗೊಂದಲಗಳನ್ನು ಆಲಿಸಿ, ಪರಿಹರಿಸಿದ್ದೇವೆ’ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಅಂಶುಮಂತ್ ತಿಳಿಸಿದರು.</p>.<p>ಟಿಕೆಟ್ಗೆ 6 ಮಂದಿ ಅರ್ಜಿ ಸಲ್ಲಿಕೆ: ಮೂಡಿಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ಗಾಗಿ ನಯನಾಮೋಟಮ್ಮ, ಎನ್.ಆರ್.ನಾಗರತ್ನ, ಹೂವಪ್ಪ, ಪ್ರಭಾಕರ್ ಬಿನ್ನಾಡಿ, ಕೆ.ಎಂ.ಶ್ರೀರಂಗಯ್ಯ, ಪವನ್ಕಿಶೋರ್ ಅರ್ಜಿ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಮೂಡಿಗೆರೆ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಗದ್ದಲ ನಡೆದಿದೆ. ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗಫೂರ್, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದ ಸ್ವಾಮಿ ಸಭೆಯಲ್ಲಿ ಇದ್ದರು. ಪಕ್ಷದ ಎಂ.ಎಲ್.ಅಭಿಜಿತ್, ಅಶೋಕ್ ಆಲ್ದೂರು ಮೊದಲಾವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಮುಂಬರುವ ವಿಧಾನಸಭೆ ಚುನಾವಣೆಗೆ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಕುರಿತು ಪಕ್ಷದ ಅಭಿಪ್ರಾಯ ಸಂಗ್ರಹ ಸಭೆ ನಡೆಯಿತು. ಆ ಪಟ್ಟಿಯಲ್ಲಿ ಕೆಲ ಮುಖಂಡರ ಹೆಸರನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿತ್ತು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆವು, ಹೊಸದಾದ ಪಟ್ಟಿ ಮಾಡಿಕೊಂಡಿದ್ದಾರೆ’ ಎಂದು ಅಭಿಜಿತ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ನಯನಾ ಮೋಟಮ್ಮ ವಿರುದ್ಧವಾಗಿರುವ ಮುಖಂಡರ ಹೆಸರುಗಳನ್ನು ಪಟ್ಟಿಯಲ್ಲಿ ಕೈಬಿಟ್ಟಿದ್ದರು. ನಯನಾ ಅವರಿಗೆ ಟಿಕೆಟ್ ನೀಡಬಾರದು ಎಂದು ಮನವಿ ಮಾಡಿದ್ದೇವೆ’ ಎಂದು ಅವರು ತಿಳಿಸಿದರು.</p>.<p>‘ಸಭೆಯಲ್ಲಿ ಕೆಲವರು ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಅವರ ಗೊಂದಲಗಳನ್ನು ಆಲಿಸಿ, ಪರಿಹರಿಸಿದ್ದೇವೆ’ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಅಂಶುಮಂತ್ ತಿಳಿಸಿದರು.</p>.<p>ಟಿಕೆಟ್ಗೆ 6 ಮಂದಿ ಅರ್ಜಿ ಸಲ್ಲಿಕೆ: ಮೂಡಿಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ಗಾಗಿ ನಯನಾಮೋಟಮ್ಮ, ಎನ್.ಆರ್.ನಾಗರತ್ನ, ಹೂವಪ್ಪ, ಪ್ರಭಾಕರ್ ಬಿನ್ನಾಡಿ, ಕೆ.ಎಂ.ಶ್ರೀರಂಗಯ್ಯ, ಪವನ್ಕಿಶೋರ್ ಅರ್ಜಿ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>