ಎರಡು ದಶಕಗಳ ಹಿಂದೆ ಸ್ಮಶಾನದಲ್ಲಿ ಶೆಡ್ ನಿರ್ಮಿಸಲಾಗಿದ್ದು, ಏಕಕಾಲದಲ್ಲಿ ಎರಡು ಟ್ರೈಲಿಯಲ್ಲಿ ದಹಿಸಲು ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ, ಟ್ರೈಲಿಗಳು ಸಂಪೂರ್ಣ ಹಾನಿಯಾಗಿದ್ದು, ಅಳಿದುಳಿದ ಕಬ್ಬಿಣದ ಶೀಟುಗಳ ನಡುವೆ ಶವವನ್ನಿಟ್ಟು ಹರಸಾಹಸ ಪಟ್ಟು ದಹಿಸುವಂತಾಗಿದೆ. ಸ್ಮಶಾನದ ಆವರಣದಲ್ಲಿ ಕಿರು ಟ್ಯಾಂಕ್ ನಿರ್ಮಾಣ ಮಾಡಿದ್ದರೂ, ನೀರು ತುಂಬಲಾಗದೇ ಸುತ್ತಲೂ ಕಾಡು ಬೆಳೆದು ನಿಂತಿದೆ. ಶವ ದಹಿಸಲು ನಿರ್ಮಿಸಿರುವ ಶೆಡ್ನ ಚಾವಣಿಯ ಶೀಟುಗಳು ಹಾರಿ ಹೋಗಿದ್ದು, ಮಳೆ ಬಂದರೆ ಶವಕ್ಕೂ ರಕ್ಷಣೆಯಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.