ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಮ್ಮದಿಯಲ್ಲಿ ಕಾಡಾನೆ ದಾಳಿ: ಬೆಳೆ ನಾಶ

ಗ್ರಾಮಗಳಲ್ಲಿ ಭಯದ ವಾತಾವರಣ: ಸ್ಥಳಾಂತರಕ್ಕೆ ಒತ್ತಾಯ
Last Updated 22 ಆಗಸ್ಟ್ 2022, 2:55 IST
ಅಕ್ಷರ ಗಾತ್ರ

ಮೂಡಿಗೆರೆ: ತಾಲ್ಲೂಕಿನ ಗೌಡಹಳ್ಳಿ ಸಮೀಪದ ಹೆಮ್ಮದಿ ಗ್ರಾಮದಲ್ಲಿ ಭಾನುವಾರ ನಸುಕಿನಲ್ಲಿ ದಾಳಿ ನಡೆಸಿರುವ ಕಾಡಾನೆಗಳು ಅಪಾರ ಪ್ರಮಾಣದ ಬೆಳೆ ನಾಶಗೊಳಿಸಿವೆ.

ನಸುಕಿನ ಮೂರು ಗಂಟೆ ಸುಮಾರಿಗೆ ಗ್ರಾಮಕ್ಕೆ ದಾಳಿ ನಡೆಸಿದ ಮೂರು ಕಾಡಾನೆಗಳು, ಎಂ.ಎಸ್. ಹರೀಶ್ ಕೊಳಗಾಮೆ ಎಂಬುವರ ತೋಟಕ್ಕೆ ನುಗ್ಗಿ ಕಾಫಿ, ಬಾಳೆ, ಅಡಿಕೆ, ಕಾಳುಮೆಣಸು ಬೆಳೆಗಳನ್ನು ನಾಶ ಮಾಡಿವೆ.

‘ಗೌಡಹಳ್ಳಿ, ಕುಂಬರಡಿ, ಬೈದುವಳ್ಳಿ, ಹೆಮ್ಮದಿ, ಸತ್ತಿಗನಹಳ್ಳಿ ಊರುಬಗೆ ಮೂಲರಹಳ್ಳಿ, ಭಾಗದಲ್ಲಿ ಹದಿನೈದದು ದಿನಗಳಿಂದಲೂ ಮೂರು ಕಾಡಾನೆಗಳು ಬೀಡುಬಿಟ್ಟಿದ್ದು, ಹಗಲಿನಲ್ಲಿ ಅರಣ್ಯ ಸೇರುವ ಕಾಡಾನೆಗಳು, ರಾತ್ರಿಯಾಗುತ್ತಿದ್ದಂತೆ ಗ್ರಾಮದೊಳಗೆ ಬರ ತೊಡಗಿವೆ.

ಇತ್ತೀಚೆಗೆ ಸತ್ತಿಗನಹಳ್ಳಿಯ ಪ್ರಭಾಕರ್ ಎಂಬುವರು ಬೈಕ್ ಸವಾರಿ ಮಾಡಿಕೊಂಡು ಬರುತ್ತಿರುವಾಗ ಕಾಡಾನೆ ದಾಳಿ ನಡೆಸಿ ಬೈಕನ್ನು ಪುಡಿ ಮಾಡಿದ್ದು, ಬೈಕ್ ಸವಾರ
ತಪ್ಪಿಸಿಕೊಂಡಿದ್ದರು. ಕಾಡಾನೆಗಳ ನಿರಂತರ ದಾಳಿಯಿಂದ ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು, ಕೃಷಿ ಚಟುವಟಿಕೆ ನಡೆಸಲು
ಸಾಧ್ಯವಾಗುತ್ತಿಲ್ಲ. ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಗಳನ್ನು
ಸ್ಥಳಾಂತರಿಸಬೇಕು’ ಎಂದು ಸ್ಥಳೀಯರು
ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT