<p><strong>ಮೂಡಿಗೆರೆ:</strong> ತಾಲ್ಲೂಕಿನ ಗೌಡಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗ್ರಾಮದ ಹುಡುಗರು ತಂಡ ನವರೂಪ ನೀಡಿದೆ.</p>.<p>ಸರ್ಕಾರಿ ಶಾಲೆ ಉಳಿಸಿ ಅಭಿಯಾನದ ಅಂಗವಾಗಿ ಗ್ರಾಮದ ಸಮಾನ ಮನಸ್ಕ ಯುವಕರು ಸೇರಿ ರಚಿಸಿಕೊಂಡಿರುವ ಪ್ರವೀಣ್ ಬೈದುವಳ್ಳಿ ನೇತೃತ್ವದ ಗ್ರಾಮದ ಯುವಕರ ತಂಡ ಹಾಗೂ ಬೆಂಗಳೂರಿನ ಬಡ್ಡಿ ಬ್ರಹ್ಮಾಂಡ, ಎಂ.ಜಿ. ಕ್ರಿಯೇಷನ್ಸ್ ಬೈಕ್ ರೈಡರ್ಸ್ ತಂಡದ ಯುವಕರು ಸೇರಿ ಶಾಲೆಯ ಗೋಡೆಗಳಿಗೆ ಬಣ್ಣ ಬಳಿಯುವುದರ ಜೊತೆಗೆ ಆಕರ್ಷಕ ಚಿತ್ತಾರಗಳನ್ನು ಮೂಡಿಸಿ ಶಾಲೆಗೆ ನವರೂಪ ನೀಡಿದ್ದಾರೆ.</p>.<p>ಕಳೆದ ಬಾರಿ ಗ್ರಾಮದ ಪ್ರೌಢಶಾಲೆಗೆ ಇದೇ ರೀತಿ ಕಾರ್ಯವನ್ನು ಮಾಡಿದ್ದ ತಂಡವು, ಈ ಬಾರಿ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರದ ಕಟ್ಟಡಗಳ ಗೋಡೆಗಳನ್ನು ವಿಭಿನ್ನ ಚಿತ್ರಗಳಿಂದ ಅಂದಗೊಳಿಸಿದ್ದಾರೆ. ಜತೆಗೆ ದಾನಿಗಳ ನೆರವಿನಿಂದ ಶಾಲೆಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದಾರೆ. ಅಂಗನವಾಡಿ ಹಾಗೂ ಶಾಲೆಯ ಗೋಡೆಗಳ ಮೇಲೆ ಸಾಲುಮರದ ತಿಮ್ಮಕ್ಕ, ಕನ್ನಡ ಮಾತೆ, ರೈತ, ಜಾನಪದ ಕಲೆಗಳು ಸೇರಿದಂತೆ ಹತ್ತಾರು ಚಿತ್ತಾರಗಳನ್ನು ಮೂಡಿಸಿದ್ದಾರೆ. ಈ ಮೂಲಕ ಶಾಲೆಗೆ ಬರುವ ಮಕ್ಕಳು ಮುದಗೊಳ್ಳುವಂತಹ ವಾತಾವರಣ ಸೃಷ್ಟಿಸಿದ್ದಾರೆ.</p>.<p>ಕಳೆದ ಫೆಬ್ರವರಿ 28 ಹಾಗೂ ಮಾರ್ಚ್ 1ರಂದು ಎರಡು ದಿನಗಳ ಕಾಲ ಗೌಡಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳ ಹತ್ತಾರು ಯುವಕರು, ವಿದ್ಯಾರ್ಥಿಗಳ ಪೋಷಕರು, ಹಳೇವಿದ್ಯಾರ್ಥಿಗಳ ಸಂಘದ ಸದಸ್ಯರು ಹಾಗೂ ಬೆಂಗಳೂರಿನಿಂದ ಬಂದ ಯುವಕರ ತಂಡದ ಸದಸ್ಯರು ಸೇರಿ ಶಾಲೆಯ ಅಂದವನ್ನು ಹೆಚ್ಚಿಸಿದ್ದಾರೆ.</p>.<p>'ವಿದ್ಯಾರ್ಥಿಗಳ ಕೊರತೆಯಿಂದ ಸರ್ಕಾರಿ ಶಾಲೆಗಳು ಎಲ್ಲೆಡೆ ಬಾಗಿಲು ಮುಚ್ಚುತ್ತಿದ್ದು ಗ್ರಾಮೀಣ ಪ್ರದೇಶದ ಮಕ್ಕಳು ಪಟ್ಟಣಗಳ ಕಡೆಗೆ ಮುಖ ಮಾಡಿದ್ದಾರೆ. ಇಂತಹ ಸನ್ನಿವೇಶದಲ್ಲಿ ನಾವೆಲ್ಲಾ ಓದಿರುವ ಸರ್ಕಾರಿ ಶಾಲೆಗಳ ಉಳಿವಿಗೆ ನಮ್ಮ ಕೈಲಾದ ಪ್ರಯತ್ನ ನಡೆಸಬೇಕಾಗಿದೆ. ಈ ನಿಟ್ಟಿನಲ್ಲಿ ಗ್ರಾಮದ ಹುಡುಗರ ತಂಡ ಇಂತಹ ಪ್ರಯತ್ನದಲ್ಲಿ ತೊಡಗಿದೆ. ಈ ಕಾರ್ಯಕ್ಕೆ ಅನೇಕ ಸಂಘಟನೆಗಳು, ಸ್ಥಳೀಯರು, ದಾನಿಗಳು ಕೈಜೋಡಿಸಿದ್ದಾರೆ. ಇಂತಹ ಕಾರ್ಯ ಎಲ್ಲಾ ಗ್ರಾಮಗಳಲ್ಲಿಯೂ ನಡೆದರೆ ನಮ್ಮ ಸರ್ಕಾರಿ ಶಾಲೆಗಳನ್ನು ಉಳಿಸಬಹುದು' ಎನ್ನುತ್ತಾರೆ ಗ್ರಾಮದ ಹುಡುಗರು ತಂಡದ ಪ್ರವೀಣ್ ಬೈದುವಳ್ಳಿ.</p>.<p>ಗೌಡಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 54 ವಿದ್ಯಾರ್ಥಿಗಳಿದ್ದಾರೆ. ಇದು ಈ ಭಾಗದ ಕೇಂದ್ರ ಸ್ಥಾನದಲ್ಲಿರುವ ಶಾಲೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಶಾಲೆಗೆ ದಾನಿಗಳು, ಗ್ರಾಮಸ್ಥರು ಹೆಚ್ಚಿನ ನೆರವು ನೀಡುತ್ತಿದ್ದಾರೆ. ಗ್ರಾಮದ ಹುಡುಗರು ತಂಡವು ಶಾಲೆಯ ಅಂದವನ್ನು ಹೆಚ್ಚಿಸಿದ್ದಾರೆ. ಹಾಗೆಯೇ ದಾನಿಗಳ ನೆರವಿನಿಂದ ಶಾಲೆಗೆ ಡೆಸ್ಕ್ ಗಳು ಹಾಗೂ ಸಿಸಿ ಕ್ಯಾಮರ ಅಳವಡಿಸಿದ್ದೇವೆ. ಜನರು ಈ ರೀತಿಯಲ್ಲಿ ಕೈಜೋಡಿಸಿದರೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅದು ಪೂರಕವಾಗುತ್ತದೆ. ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಉತ್ತೇಜನಕಾರಿಯಾಗುತ್ತದೆ' ಎನ್ನುತ್ತಾರೆ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಆರ್. ಪ್ರಕಾಶ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ:</strong> ತಾಲ್ಲೂಕಿನ ಗೌಡಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗ್ರಾಮದ ಹುಡುಗರು ತಂಡ ನವರೂಪ ನೀಡಿದೆ.</p>.<p>ಸರ್ಕಾರಿ ಶಾಲೆ ಉಳಿಸಿ ಅಭಿಯಾನದ ಅಂಗವಾಗಿ ಗ್ರಾಮದ ಸಮಾನ ಮನಸ್ಕ ಯುವಕರು ಸೇರಿ ರಚಿಸಿಕೊಂಡಿರುವ ಪ್ರವೀಣ್ ಬೈದುವಳ್ಳಿ ನೇತೃತ್ವದ ಗ್ರಾಮದ ಯುವಕರ ತಂಡ ಹಾಗೂ ಬೆಂಗಳೂರಿನ ಬಡ್ಡಿ ಬ್ರಹ್ಮಾಂಡ, ಎಂ.ಜಿ. ಕ್ರಿಯೇಷನ್ಸ್ ಬೈಕ್ ರೈಡರ್ಸ್ ತಂಡದ ಯುವಕರು ಸೇರಿ ಶಾಲೆಯ ಗೋಡೆಗಳಿಗೆ ಬಣ್ಣ ಬಳಿಯುವುದರ ಜೊತೆಗೆ ಆಕರ್ಷಕ ಚಿತ್ತಾರಗಳನ್ನು ಮೂಡಿಸಿ ಶಾಲೆಗೆ ನವರೂಪ ನೀಡಿದ್ದಾರೆ.</p>.<p>ಕಳೆದ ಬಾರಿ ಗ್ರಾಮದ ಪ್ರೌಢಶಾಲೆಗೆ ಇದೇ ರೀತಿ ಕಾರ್ಯವನ್ನು ಮಾಡಿದ್ದ ತಂಡವು, ಈ ಬಾರಿ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರದ ಕಟ್ಟಡಗಳ ಗೋಡೆಗಳನ್ನು ವಿಭಿನ್ನ ಚಿತ್ರಗಳಿಂದ ಅಂದಗೊಳಿಸಿದ್ದಾರೆ. ಜತೆಗೆ ದಾನಿಗಳ ನೆರವಿನಿಂದ ಶಾಲೆಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದಾರೆ. ಅಂಗನವಾಡಿ ಹಾಗೂ ಶಾಲೆಯ ಗೋಡೆಗಳ ಮೇಲೆ ಸಾಲುಮರದ ತಿಮ್ಮಕ್ಕ, ಕನ್ನಡ ಮಾತೆ, ರೈತ, ಜಾನಪದ ಕಲೆಗಳು ಸೇರಿದಂತೆ ಹತ್ತಾರು ಚಿತ್ತಾರಗಳನ್ನು ಮೂಡಿಸಿದ್ದಾರೆ. ಈ ಮೂಲಕ ಶಾಲೆಗೆ ಬರುವ ಮಕ್ಕಳು ಮುದಗೊಳ್ಳುವಂತಹ ವಾತಾವರಣ ಸೃಷ್ಟಿಸಿದ್ದಾರೆ.</p>.<p>ಕಳೆದ ಫೆಬ್ರವರಿ 28 ಹಾಗೂ ಮಾರ್ಚ್ 1ರಂದು ಎರಡು ದಿನಗಳ ಕಾಲ ಗೌಡಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳ ಹತ್ತಾರು ಯುವಕರು, ವಿದ್ಯಾರ್ಥಿಗಳ ಪೋಷಕರು, ಹಳೇವಿದ್ಯಾರ್ಥಿಗಳ ಸಂಘದ ಸದಸ್ಯರು ಹಾಗೂ ಬೆಂಗಳೂರಿನಿಂದ ಬಂದ ಯುವಕರ ತಂಡದ ಸದಸ್ಯರು ಸೇರಿ ಶಾಲೆಯ ಅಂದವನ್ನು ಹೆಚ್ಚಿಸಿದ್ದಾರೆ.</p>.<p>'ವಿದ್ಯಾರ್ಥಿಗಳ ಕೊರತೆಯಿಂದ ಸರ್ಕಾರಿ ಶಾಲೆಗಳು ಎಲ್ಲೆಡೆ ಬಾಗಿಲು ಮುಚ್ಚುತ್ತಿದ್ದು ಗ್ರಾಮೀಣ ಪ್ರದೇಶದ ಮಕ್ಕಳು ಪಟ್ಟಣಗಳ ಕಡೆಗೆ ಮುಖ ಮಾಡಿದ್ದಾರೆ. ಇಂತಹ ಸನ್ನಿವೇಶದಲ್ಲಿ ನಾವೆಲ್ಲಾ ಓದಿರುವ ಸರ್ಕಾರಿ ಶಾಲೆಗಳ ಉಳಿವಿಗೆ ನಮ್ಮ ಕೈಲಾದ ಪ್ರಯತ್ನ ನಡೆಸಬೇಕಾಗಿದೆ. ಈ ನಿಟ್ಟಿನಲ್ಲಿ ಗ್ರಾಮದ ಹುಡುಗರ ತಂಡ ಇಂತಹ ಪ್ರಯತ್ನದಲ್ಲಿ ತೊಡಗಿದೆ. ಈ ಕಾರ್ಯಕ್ಕೆ ಅನೇಕ ಸಂಘಟನೆಗಳು, ಸ್ಥಳೀಯರು, ದಾನಿಗಳು ಕೈಜೋಡಿಸಿದ್ದಾರೆ. ಇಂತಹ ಕಾರ್ಯ ಎಲ್ಲಾ ಗ್ರಾಮಗಳಲ್ಲಿಯೂ ನಡೆದರೆ ನಮ್ಮ ಸರ್ಕಾರಿ ಶಾಲೆಗಳನ್ನು ಉಳಿಸಬಹುದು' ಎನ್ನುತ್ತಾರೆ ಗ್ರಾಮದ ಹುಡುಗರು ತಂಡದ ಪ್ರವೀಣ್ ಬೈದುವಳ್ಳಿ.</p>.<p>ಗೌಡಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 54 ವಿದ್ಯಾರ್ಥಿಗಳಿದ್ದಾರೆ. ಇದು ಈ ಭಾಗದ ಕೇಂದ್ರ ಸ್ಥಾನದಲ್ಲಿರುವ ಶಾಲೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಶಾಲೆಗೆ ದಾನಿಗಳು, ಗ್ರಾಮಸ್ಥರು ಹೆಚ್ಚಿನ ನೆರವು ನೀಡುತ್ತಿದ್ದಾರೆ. ಗ್ರಾಮದ ಹುಡುಗರು ತಂಡವು ಶಾಲೆಯ ಅಂದವನ್ನು ಹೆಚ್ಚಿಸಿದ್ದಾರೆ. ಹಾಗೆಯೇ ದಾನಿಗಳ ನೆರವಿನಿಂದ ಶಾಲೆಗೆ ಡೆಸ್ಕ್ ಗಳು ಹಾಗೂ ಸಿಸಿ ಕ್ಯಾಮರ ಅಳವಡಿಸಿದ್ದೇವೆ. ಜನರು ಈ ರೀತಿಯಲ್ಲಿ ಕೈಜೋಡಿಸಿದರೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅದು ಪೂರಕವಾಗುತ್ತದೆ. ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಉತ್ತೇಜನಕಾರಿಯಾಗುತ್ತದೆ' ಎನ್ನುತ್ತಾರೆ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಆರ್. ಪ್ರಕಾಶ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>