<p><strong>ಮೂಡಿಗೆರೆ</strong>: ತಾಲ್ಲೂಕಿನಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಪೊಲೀಸ್ ಇಲಾಖೆ, ಚಾರ್ಮಾಡಿಘಾಟಿ-ದೇವನಗೂಲ್ ಲಿಂಕ್ ರಸ್ತೆಗೆ ಗೇಟ್ ಅಳವಡಿಕೆ ಮಾಡಿದೆ.</p>.<p>ಕೊಟ್ಟಿಗೆಹಾರದ ಚೆಕ್ ಪೋಸ್ಟ್ ತಪ್ಪಿಸುವ ಸಲುವಾಗಿ ಕೆಲವು ವಾಹನಗಳು ದೇವನಗೂಲ್ ಮಾರ್ಗವಾಗಿ ಬಂದು, ಚಾರ್ಮಾಡಿಘಾಟಿ ರಸ್ತೆಗೆ ಸೇರುತ್ತಿದ್ದವು. ದನಗಳ ಕಳ್ಳ ಸಾಗಾಣಿಕೆಯ ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ ಎಂಬ ಆರೋಪ ಕೇಳಿ ಬಂದಿತ್ತು. ಆ ನಿಟ್ಟಿನಲ್ಲಿ ರಸ್ತೆಗೆ ಅಡ್ಡಲಾಗಿ ಗೇಟ್ ಅಳವಡಿಸಲಾಗಿದ್ದು, ಈ ಗೇಟನ್ನು ಹಗಲಿನಲ್ಲಿ ಮಾತ್ರ ತೆಗೆದು, ರಾತ್ರಿ ವೇಳೆಯಲ್ಲಿ ಮುಚ್ಚಲಾಗುತ್ತದೆ. ಇದರಿಂದ ತಾಲ್ಲೂಕಿನಿಂದ ಚಾರ್ಮಾಡಿ ಘಾಟಿ ಮೂಲಕ ಕರಾವಳಿಗೆ ಸಾಗುವ ವಾಹನಗಳೆಲ್ಲವೂ ಕೊಟ್ಟಿಗೆಹಾರ ಚೆಕ್ ಪೋಸ್ಟ್ ಮೂಲಕವೇ ಸಾಗಬೇಕಿದ್ದು, ಸಿಸಿಟಿವಿ ಕ್ಯಾಮೆರಾದ ಕಣ್ಗಾವಲಿಗೂ ಸಿಲುಕಲಿವೆ. ರಾತ್ರಿ 10ರಿಂದ ಬೆಳಿಗ್ಗೆ 6ರವರೆಗೆ ಈ ಮಾರ್ಗ ಸಂಪೂರ್ಣ ಬಂದ್ ಆಗಲಿದೆ. ಗೇಟ್ನ ಕೀಲಿಯನ್ನು ಕೊಟ್ಟಿಗೆಹಾರ ಚೆಕ್ಪೋಸ್ಟ್ ಸಿಬ್ಬಂದಿ ವಶದಲ್ಲಿರಿಸಿಕೊಂಡು ನಿರ್ವಹಣೆ ಕೈಗೊಳ್ಳಲಾಗುತ್ತಿದೆ.</p>.<p>'ಚಾರ್ಮಾಡಿ ಘಾಟಿ ಪ್ರದೇಶದ ಅಡ್ಡದಾರಿಯಲ್ಲಿ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳು ಈಗ ಇತಿಹಾಸ. ಗೇಟ್ ಅಳವಡಿಕೆ ಕೇವಲ ತಾತ್ಕಾಲಿಕ ಪರಿಹಾರವಲ್ಲ, ಜನರ ಸುರಕ್ಷತೆ ಹಾಗೂ ಶಾಂತಿಗಾಗಿ ದೀರ್ಘಕಾಲಿಕ ಹೆಜ್ಜೆ. ಗ್ರಾಮಸ್ಥರ ಸಹಕಾರವು ಈ ಕಾರ್ಯಕ್ಕೆ ಜೀವ ತುಂಬಿದೆ. ಪೊಲೀಸರೊಂದಿಗೆ–ಜನ ಕೈಜೋಡಿಸಿದರೆ ಯಾವುದೇ ಕಾನೂನು ಉಲ್ಲಂಘನೆ ಆಗುವುದಿಲ್ಲ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಹೇಳಿದರು.</p>.<p>ಪೊಲೀಸ್ ಇಲಾಖೆಯಿಂದ ಗೇಟ್ ಅಳವಡಿಸಿರುವುದಕ್ಕೆ ಸ್ಥಳೀಯರು ಹರ್ಷ ವ್ಯಕ್ತ ಪಡಿಸಿದ್ದು, ದನ ಕಳ್ಳತನದಂತಹ ಅಕ್ರಮ ಚಟುವಟಿಕೆಗಳು ನಿಲ್ಲಬಹುದು ಎಂಬ ನಿರೀಕ್ಷೆ ಜನರಲ್ಲಿ ಮೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ</strong>: ತಾಲ್ಲೂಕಿನಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಪೊಲೀಸ್ ಇಲಾಖೆ, ಚಾರ್ಮಾಡಿಘಾಟಿ-ದೇವನಗೂಲ್ ಲಿಂಕ್ ರಸ್ತೆಗೆ ಗೇಟ್ ಅಳವಡಿಕೆ ಮಾಡಿದೆ.</p>.<p>ಕೊಟ್ಟಿಗೆಹಾರದ ಚೆಕ್ ಪೋಸ್ಟ್ ತಪ್ಪಿಸುವ ಸಲುವಾಗಿ ಕೆಲವು ವಾಹನಗಳು ದೇವನಗೂಲ್ ಮಾರ್ಗವಾಗಿ ಬಂದು, ಚಾರ್ಮಾಡಿಘಾಟಿ ರಸ್ತೆಗೆ ಸೇರುತ್ತಿದ್ದವು. ದನಗಳ ಕಳ್ಳ ಸಾಗಾಣಿಕೆಯ ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ ಎಂಬ ಆರೋಪ ಕೇಳಿ ಬಂದಿತ್ತು. ಆ ನಿಟ್ಟಿನಲ್ಲಿ ರಸ್ತೆಗೆ ಅಡ್ಡಲಾಗಿ ಗೇಟ್ ಅಳವಡಿಸಲಾಗಿದ್ದು, ಈ ಗೇಟನ್ನು ಹಗಲಿನಲ್ಲಿ ಮಾತ್ರ ತೆಗೆದು, ರಾತ್ರಿ ವೇಳೆಯಲ್ಲಿ ಮುಚ್ಚಲಾಗುತ್ತದೆ. ಇದರಿಂದ ತಾಲ್ಲೂಕಿನಿಂದ ಚಾರ್ಮಾಡಿ ಘಾಟಿ ಮೂಲಕ ಕರಾವಳಿಗೆ ಸಾಗುವ ವಾಹನಗಳೆಲ್ಲವೂ ಕೊಟ್ಟಿಗೆಹಾರ ಚೆಕ್ ಪೋಸ್ಟ್ ಮೂಲಕವೇ ಸಾಗಬೇಕಿದ್ದು, ಸಿಸಿಟಿವಿ ಕ್ಯಾಮೆರಾದ ಕಣ್ಗಾವಲಿಗೂ ಸಿಲುಕಲಿವೆ. ರಾತ್ರಿ 10ರಿಂದ ಬೆಳಿಗ್ಗೆ 6ರವರೆಗೆ ಈ ಮಾರ್ಗ ಸಂಪೂರ್ಣ ಬಂದ್ ಆಗಲಿದೆ. ಗೇಟ್ನ ಕೀಲಿಯನ್ನು ಕೊಟ್ಟಿಗೆಹಾರ ಚೆಕ್ಪೋಸ್ಟ್ ಸಿಬ್ಬಂದಿ ವಶದಲ್ಲಿರಿಸಿಕೊಂಡು ನಿರ್ವಹಣೆ ಕೈಗೊಳ್ಳಲಾಗುತ್ತಿದೆ.</p>.<p>'ಚಾರ್ಮಾಡಿ ಘಾಟಿ ಪ್ರದೇಶದ ಅಡ್ಡದಾರಿಯಲ್ಲಿ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳು ಈಗ ಇತಿಹಾಸ. ಗೇಟ್ ಅಳವಡಿಕೆ ಕೇವಲ ತಾತ್ಕಾಲಿಕ ಪರಿಹಾರವಲ್ಲ, ಜನರ ಸುರಕ್ಷತೆ ಹಾಗೂ ಶಾಂತಿಗಾಗಿ ದೀರ್ಘಕಾಲಿಕ ಹೆಜ್ಜೆ. ಗ್ರಾಮಸ್ಥರ ಸಹಕಾರವು ಈ ಕಾರ್ಯಕ್ಕೆ ಜೀವ ತುಂಬಿದೆ. ಪೊಲೀಸರೊಂದಿಗೆ–ಜನ ಕೈಜೋಡಿಸಿದರೆ ಯಾವುದೇ ಕಾನೂನು ಉಲ್ಲಂಘನೆ ಆಗುವುದಿಲ್ಲ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಹೇಳಿದರು.</p>.<p>ಪೊಲೀಸ್ ಇಲಾಖೆಯಿಂದ ಗೇಟ್ ಅಳವಡಿಸಿರುವುದಕ್ಕೆ ಸ್ಥಳೀಯರು ಹರ್ಷ ವ್ಯಕ್ತ ಪಡಿಸಿದ್ದು, ದನ ಕಳ್ಳತನದಂತಹ ಅಕ್ರಮ ಚಟುವಟಿಕೆಗಳು ನಿಲ್ಲಬಹುದು ಎಂಬ ನಿರೀಕ್ಷೆ ಜನರಲ್ಲಿ ಮೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>