ನಿವೇಶನ ರಹಿತರಿಗೆ ಮಂಜೂರಾಗಿರುವ ಸರ್ಕಾರಿ ಜಾಗವನ್ನು ನಿವೇಶನಕ್ಕಾಗಿ ಗಡಿ ಗುರುತು ಮಾಡದೇ ತಾಲ್ಲೂಕು ಆಡಳಿತ ನಿರ್ಲಕ್ಷ್ಯ ತೋರಿತ್ತು. ಈ ಹಿನ್ನಲೆಯಲ್ಲಿ ವಸತಿಗಾಗಿ ಹೋರಾಟ ಸಮಿತಿ ವತಿಯಿಂದ ಬುಧವಾರ ತಾಲ್ಲೂಕು ಕಚೇರಿ ಎದುರು ಅನಿರ್ಧಿಷ್ಟಾವದಿ ಧರಣಿಗೆ ತಯಾರಿ ಮಾಡಿಕೊಳ್ಳಲಾಗಿತ್ತು. ಬುಧವಾರ ತಾಲ್ಲೂಕು ಆಡಳಿತ ಗಡಿ ಗುರುತು ಮಾಡಲು ಮುಂದಾಗಿದೆ. ತಹಶೀಲ್ದಾರರು ಸೋಮವಾರದೊಳಗೆ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರಿಂದ ಧರಣಿ ಹಿಂಪಡೆದಿದ್ದು, ಸೋಮವಾರ ಬಗೆಹರಿಸದಿದ್ದರೆ ಮತ್ತೆ ಧರಣಿ ಪ್ರಾರಂಭಿಸಲಾಗುವುದು’ ಎಂದು ಸಿಪಿಐಎಂಎಲ್ ರಾಜ್ಯ ಕಾರ್ಯದರ್ಶಿ ಬಿ. ರುದ್ರಯ್ಯ ತಿಳಿಸಿದರು.