<p><strong>ಚಿಕ್ಕಮಗಳೂರು:</strong> ಗಣೇಶ ಚತುರ್ಥಿ ಸಂದರ್ಭದಲ್ಲಿ ಮುಳ್ಳಯ್ಯನಗಿರಿ, ಬಾಬಾಬುಡನ್ಗಿರಿ ಪ್ರವಾಸ ತೆರಳಲು ಉದ್ದೇಶಿಸಿದ್ದರೆ ಮುಂದೂಡುವಂತೆ ಜಿಲ್ಲಾಡಳಿತ ಪ್ರವಾಸಿಗರಿಗೆ ಸಲಹೆ ನೀಡಿದೆ.</p><p>ಕಸಬಾ, ವಸ್ತಾರೆ, ಆವತಿ, ಅಂಬಳೆ ಮತ್ತು ಜಾಗರ ಹೋಬಳಿಯ 40ಕ್ಕೂ ಹೆಚ್ಚು ಹಳ್ಳಿಗಳ ಗ್ರಾಮಸ್ಥರು ಮೇಲು ಗದ್ದುಗೆ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ. ಗುರು ನಾರುಕಂತೆ ಮಠಗಳಿಗೆ ತೆರಳಿ ಚೌತಿ ಕಾಯಿ ಒಡೆಸಿ ಪೂಜೆ ಮಾಡಿಸುವುದು ನೂರಾರು ವರ್ಷಗಳಿಂದ ಇರುವ ಪಾರಂಪರಿಕ ಆಚರಣೆ.</p><p>ಇದೇ ಸಂದರ್ಭದಲ್ಲಿ ಸಾರ್ವತ್ರಿಕ ರಜೆ ಇರುವುದರಿಂದ ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಶ್ರೀ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ, ಮಾಣಿಕ್ಯಧಾರ ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುವ ನಿರೀಕ್ಷೆ ಇದೆ.</p><p>ಈ ಮಾರ್ಗಗಳಲ್ಲಿ ಕಿರಿದಾದ ರಸ್ತೆಗಳಿದ್ದು, ಜನ ಹಾಗೂ ವಾಹನಗಳ ದಟ್ಟಣೆ ಉಂಟಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಆದ್ದರಿಂದ ಈ ಮಾರ್ಗದಲ್ಲಿ ಹೋಂಸ್ಟೆ, ರೆಸಾರ್ಟ್ಗಳಲ್ಲಿ ಮುಂಗಡವಾಗಿ ಕೊಠಡಿಗಳನ್ನು ಕಾಯ್ದಿರಿಸಿರುವ ಪ್ರವಾಸಿಗರನ್ನು ಹೊರತುಪಡಿಸಿ ಉಳಿದವರು ಪ್ರವಾಸ ಮುಂದೂಡುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಗಣೇಶ ಚತುರ್ಥಿ ಸಂದರ್ಭದಲ್ಲಿ ಮುಳ್ಳಯ್ಯನಗಿರಿ, ಬಾಬಾಬುಡನ್ಗಿರಿ ಪ್ರವಾಸ ತೆರಳಲು ಉದ್ದೇಶಿಸಿದ್ದರೆ ಮುಂದೂಡುವಂತೆ ಜಿಲ್ಲಾಡಳಿತ ಪ್ರವಾಸಿಗರಿಗೆ ಸಲಹೆ ನೀಡಿದೆ.</p><p>ಕಸಬಾ, ವಸ್ತಾರೆ, ಆವತಿ, ಅಂಬಳೆ ಮತ್ತು ಜಾಗರ ಹೋಬಳಿಯ 40ಕ್ಕೂ ಹೆಚ್ಚು ಹಳ್ಳಿಗಳ ಗ್ರಾಮಸ್ಥರು ಮೇಲು ಗದ್ದುಗೆ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ. ಗುರು ನಾರುಕಂತೆ ಮಠಗಳಿಗೆ ತೆರಳಿ ಚೌತಿ ಕಾಯಿ ಒಡೆಸಿ ಪೂಜೆ ಮಾಡಿಸುವುದು ನೂರಾರು ವರ್ಷಗಳಿಂದ ಇರುವ ಪಾರಂಪರಿಕ ಆಚರಣೆ.</p><p>ಇದೇ ಸಂದರ್ಭದಲ್ಲಿ ಸಾರ್ವತ್ರಿಕ ರಜೆ ಇರುವುದರಿಂದ ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಶ್ರೀ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ, ಮಾಣಿಕ್ಯಧಾರ ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುವ ನಿರೀಕ್ಷೆ ಇದೆ.</p><p>ಈ ಮಾರ್ಗಗಳಲ್ಲಿ ಕಿರಿದಾದ ರಸ್ತೆಗಳಿದ್ದು, ಜನ ಹಾಗೂ ವಾಹನಗಳ ದಟ್ಟಣೆ ಉಂಟಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಆದ್ದರಿಂದ ಈ ಮಾರ್ಗದಲ್ಲಿ ಹೋಂಸ್ಟೆ, ರೆಸಾರ್ಟ್ಗಳಲ್ಲಿ ಮುಂಗಡವಾಗಿ ಕೊಠಡಿಗಳನ್ನು ಕಾಯ್ದಿರಿಸಿರುವ ಪ್ರವಾಸಿಗರನ್ನು ಹೊರತುಪಡಿಸಿ ಉಳಿದವರು ಪ್ರವಾಸ ಮುಂದೂಡುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>