<p><strong>ಚಿಕ್ಕಮಗಳೂರು:</strong> ಹಣದ ಆಸೆಗೆ ತಾಯಿಯನ್ನೇ ಕೊಲೆ ಮಾಡಿದ ಗಣೇಶ (40) ಎಂಬಾತಗೆ ನಗರದ ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ಕೋರ್ಟ್ ನಾಲ್ಕು ವರ್ಷ ಕಠಿಣ ಸಜೆ, ₹ 5,000 ದಂಡ ವಿಧಿಸಿದೆ.</p>.<p>ನ್ಯಾಯಾಧೀಶರಾದ ಉಮೇಶ್ ಎಂ.ಅಡಿಗ ಅವರು ಈ ಆದೇಶ ನೀಡಿದ್ದಾರೆ. ದಂಡ ಕಟ್ಟದಿದ್ದರೆ ಹೆಚ್ಚುವರಿಯಾಗಿ ಮೂರು ತಿಂಗಳು ಶಿಕ್ಷೆ ಅನುಭವಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.</p>.<p><strong>ಏನಿದು ಪ್ರಕರಣ?:</strong> 2019 ಜನವರಿ 16ರಂದು ರಾತ್ರಿ 9.30ರ ಹೊತ್ತಿನಲ್ಲಿ ಬಣಕಲ್ನ ಹೊರಟ್ಟಿ ಕಾಲೊನಿಯಲ್ಲಿ ಕೊಲೆ ಪ್ರಕರಣ ನಡೆದಿತ್ತು.</p>.<p>ವೃದ್ಧಾಪ್ಯ ವೇತನ (₹ 600) ಕಸಿದುಕೊಳ್ಳಲು ಗಣೇಶ ತಾಯಿ ಮೀನಾಕ್ಷಮ್ಮ ಅವರೊಂದಿಗೆ ಜಗಳವಾಡಿದ್ದ. ಹಣ ಕೊಡಲಿಲ್ಲ ಎಂದು ಊರುಗೋಲು–ದೊಣ್ಣೆಯಿಂದ ತಲೆ, ಕೈ, ಕಾಲಿಗೆ ಹೊಡೆದು ಕೊಲೆ ಮಾಡಿದ್ದ.</p>.<p>ಶವವನ್ನು ಚನ್ನಕೇಶವ ಎಂಬವರ ಮನೆ ಮುಂಭಾಗದ ರಸ್ತೆ ಬದಿಯಲ್ಲಿ ಹಾಕಿದ್ದ. ಬಣಕಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆ ನಡೆಸಿ ಕೋರ್ಟ್ಗೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.</p>.<p>ಪಬ್ಲಿಕ್ ಪ್ರಾಸಿಕ್ಯುಟರ್ ವಿ.ಜಿ.ಯಳಗೇರಿ, ಭಾವನಾ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಹಣದ ಆಸೆಗೆ ತಾಯಿಯನ್ನೇ ಕೊಲೆ ಮಾಡಿದ ಗಣೇಶ (40) ಎಂಬಾತಗೆ ನಗರದ ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ಕೋರ್ಟ್ ನಾಲ್ಕು ವರ್ಷ ಕಠಿಣ ಸಜೆ, ₹ 5,000 ದಂಡ ವಿಧಿಸಿದೆ.</p>.<p>ನ್ಯಾಯಾಧೀಶರಾದ ಉಮೇಶ್ ಎಂ.ಅಡಿಗ ಅವರು ಈ ಆದೇಶ ನೀಡಿದ್ದಾರೆ. ದಂಡ ಕಟ್ಟದಿದ್ದರೆ ಹೆಚ್ಚುವರಿಯಾಗಿ ಮೂರು ತಿಂಗಳು ಶಿಕ್ಷೆ ಅನುಭವಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.</p>.<p><strong>ಏನಿದು ಪ್ರಕರಣ?:</strong> 2019 ಜನವರಿ 16ರಂದು ರಾತ್ರಿ 9.30ರ ಹೊತ್ತಿನಲ್ಲಿ ಬಣಕಲ್ನ ಹೊರಟ್ಟಿ ಕಾಲೊನಿಯಲ್ಲಿ ಕೊಲೆ ಪ್ರಕರಣ ನಡೆದಿತ್ತು.</p>.<p>ವೃದ್ಧಾಪ್ಯ ವೇತನ (₹ 600) ಕಸಿದುಕೊಳ್ಳಲು ಗಣೇಶ ತಾಯಿ ಮೀನಾಕ್ಷಮ್ಮ ಅವರೊಂದಿಗೆ ಜಗಳವಾಡಿದ್ದ. ಹಣ ಕೊಡಲಿಲ್ಲ ಎಂದು ಊರುಗೋಲು–ದೊಣ್ಣೆಯಿಂದ ತಲೆ, ಕೈ, ಕಾಲಿಗೆ ಹೊಡೆದು ಕೊಲೆ ಮಾಡಿದ್ದ.</p>.<p>ಶವವನ್ನು ಚನ್ನಕೇಶವ ಎಂಬವರ ಮನೆ ಮುಂಭಾಗದ ರಸ್ತೆ ಬದಿಯಲ್ಲಿ ಹಾಕಿದ್ದ. ಬಣಕಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆ ನಡೆಸಿ ಕೋರ್ಟ್ಗೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.</p>.<p>ಪಬ್ಲಿಕ್ ಪ್ರಾಸಿಕ್ಯುಟರ್ ವಿ.ಜಿ.ಯಳಗೇರಿ, ಭಾವನಾ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>