ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲೆ ಪ್ರಕರಣ: ಆರೋಪಿ ಬಂಧನ

Last Updated 3 ಸೆಪ್ಟೆಂಬರ್ 2020, 17:15 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲೆಯ ಅಜ್ಜಂಪುರ ದಲ್ಲಿ ಈಚೆಗೆ ನಡೆದಿದ್ದ ನಾಗರಾಜ ನಾಯ್ಕ ಕೊಲೆ ಪ್ರಕರಣಕ್ಕೆ ಸಂಬಂಧಿ ಸಿದಂತೆ ದಾವಣಗೆರೆ ತಾಲ್ಲೂಕಿನ ಅಣಜಿಗೊಲ್ಲರಹಟ್ಟಿ ಗ್ರಾಮದ ಆರೋಪಿ ಈರಣ್ಣ (70) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್‌ ಇನ್‌ಸ್ಪೆಕ್ಟರ್‌ ಕೆ.ಯೋಗೀಶ್‌, ಪಿಎಸ್‌ಐ ಜಿ.ಕೆ.ಬಸವರಾಜ್‌ ನೇತೃತ್ವದ ತಂಡದವರು ಕೊಲೆ ಪ್ರಕರಣದ ಜಾಡು ಹಿಡಿದು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.

ತಂಡವು ನಾಗರಾಜ ನಾಯ್ಕನ ಜತೆಯಲ್ಲಿ ಕೆಲಸ ಮಾಡು ತ್ತಿದ್ದ ನಾಗಣ್ಣ ಮತ್ತು ಇತರ ಇಬ್ಬರನ್ನು ಹಿಡಿದು ವಿಚಾರಣೆ ನಡೆಸಿದಾಗ ಕೃತ್ಯದ ಸುಳಿವು ಸಿಕ್ಕಿದೆ.

‘ಈರಣ್ಣ ಆ. 22ರಂದು ರಾತ್ರಿ ನಾಗರಾಜ ನಾಯ್ಕನನ್ನು ಕಲ್ಲು ಎತ್ತಿ ಹಾಕಿ ಹತ್ಯೆಗೈದು, ಗೋಣಿ ಚೀಲಕ್ಕೆ ತುಂಬಿ ಪೆಟ್ರೋಲ್‌ ಸುರಿದು ಬೆಂಕಿ ಇಟ್ಟ ಎಂದು ನಾಗಣ್ಣ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಏನಿದು ಪ್ರಕರಣ: ದಾವಣಗೆರೆ ತಾಲ್ಲೂಕಿನ ಲಕ್ಷ್ಮಿಪುರ ತಾಂಡ್ಯಾದ ನಾಗರಾಜ ನಾಯ್ಕ (50) ಎಂಬಾತ ನನನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಅಜ್ಜಂಪುರದ ಟಿ.ಎಚ್‌. ರಸ್ತೆಯ ಕಿರಾಳಮ್ಮ ದೇವರ ತೇರುಮನೆ ಸಮೀಪ ಬಸ್‌ ನಿಲ್ದಾಣದ ಪಕ್ಕದ ಪೆಟ್ಟಿಗೆ ಅಂಗಡಿ ಬಳಿ ಆ.23ರಂದು ಶವ ಪತ್ತೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT