<p><strong>ಚಿಕ್ಕಮಗಳೂರು: ಜಿ</strong>ಲ್ಲೆಯ ಅಜ್ಜಂಪುರ ದಲ್ಲಿ ಈಚೆಗೆ ನಡೆದಿದ್ದ ನಾಗರಾಜ ನಾಯ್ಕ ಕೊಲೆ ಪ್ರಕರಣಕ್ಕೆ ಸಂಬಂಧಿ ಸಿದಂತೆ ದಾವಣಗೆರೆ ತಾಲ್ಲೂಕಿನ ಅಣಜಿಗೊಲ್ಲರಹಟ್ಟಿ ಗ್ರಾಮದ ಆರೋಪಿ ಈರಣ್ಣ (70) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಪೊಲೀಸ್ ಇನ್ಸ್ಪೆಕ್ಟರ್ ಕೆ.ಯೋಗೀಶ್, ಪಿಎಸ್ಐ ಜಿ.ಕೆ.ಬಸವರಾಜ್ ನೇತೃತ್ವದ ತಂಡದವರು ಕೊಲೆ ಪ್ರಕರಣದ ಜಾಡು ಹಿಡಿದು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.</p>.<p>ತಂಡವು ನಾಗರಾಜ ನಾಯ್ಕನ ಜತೆಯಲ್ಲಿ ಕೆಲಸ ಮಾಡು ತ್ತಿದ್ದ ನಾಗಣ್ಣ ಮತ್ತು ಇತರ ಇಬ್ಬರನ್ನು ಹಿಡಿದು ವಿಚಾರಣೆ ನಡೆಸಿದಾಗ ಕೃತ್ಯದ ಸುಳಿವು ಸಿಕ್ಕಿದೆ.</p>.<p>‘ಈರಣ್ಣ ಆ. 22ರಂದು ರಾತ್ರಿ ನಾಗರಾಜ ನಾಯ್ಕನನ್ನು ಕಲ್ಲು ಎತ್ತಿ ಹಾಕಿ ಹತ್ಯೆಗೈದು, ಗೋಣಿ ಚೀಲಕ್ಕೆ ತುಂಬಿ ಪೆಟ್ರೋಲ್ ಸುರಿದು ಬೆಂಕಿ ಇಟ್ಟ ಎಂದು ನಾಗಣ್ಣ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p class="Subhead">ಏನಿದು ಪ್ರಕರಣ: ದಾವಣಗೆರೆ ತಾಲ್ಲೂಕಿನ ಲಕ್ಷ್ಮಿಪುರ ತಾಂಡ್ಯಾದ ನಾಗರಾಜ ನಾಯ್ಕ (50) ಎಂಬಾತ ನನನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಅಜ್ಜಂಪುರದ ಟಿ.ಎಚ್. ರಸ್ತೆಯ ಕಿರಾಳಮ್ಮ ದೇವರ ತೇರುಮನೆ ಸಮೀಪ ಬಸ್ ನಿಲ್ದಾಣದ ಪಕ್ಕದ ಪೆಟ್ಟಿಗೆ ಅಂಗಡಿ ಬಳಿ ಆ.23ರಂದು ಶವ ಪತ್ತೆಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: ಜಿ</strong>ಲ್ಲೆಯ ಅಜ್ಜಂಪುರ ದಲ್ಲಿ ಈಚೆಗೆ ನಡೆದಿದ್ದ ನಾಗರಾಜ ನಾಯ್ಕ ಕೊಲೆ ಪ್ರಕರಣಕ್ಕೆ ಸಂಬಂಧಿ ಸಿದಂತೆ ದಾವಣಗೆರೆ ತಾಲ್ಲೂಕಿನ ಅಣಜಿಗೊಲ್ಲರಹಟ್ಟಿ ಗ್ರಾಮದ ಆರೋಪಿ ಈರಣ್ಣ (70) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಪೊಲೀಸ್ ಇನ್ಸ್ಪೆಕ್ಟರ್ ಕೆ.ಯೋಗೀಶ್, ಪಿಎಸ್ಐ ಜಿ.ಕೆ.ಬಸವರಾಜ್ ನೇತೃತ್ವದ ತಂಡದವರು ಕೊಲೆ ಪ್ರಕರಣದ ಜಾಡು ಹಿಡಿದು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.</p>.<p>ತಂಡವು ನಾಗರಾಜ ನಾಯ್ಕನ ಜತೆಯಲ್ಲಿ ಕೆಲಸ ಮಾಡು ತ್ತಿದ್ದ ನಾಗಣ್ಣ ಮತ್ತು ಇತರ ಇಬ್ಬರನ್ನು ಹಿಡಿದು ವಿಚಾರಣೆ ನಡೆಸಿದಾಗ ಕೃತ್ಯದ ಸುಳಿವು ಸಿಕ್ಕಿದೆ.</p>.<p>‘ಈರಣ್ಣ ಆ. 22ರಂದು ರಾತ್ರಿ ನಾಗರಾಜ ನಾಯ್ಕನನ್ನು ಕಲ್ಲು ಎತ್ತಿ ಹಾಕಿ ಹತ್ಯೆಗೈದು, ಗೋಣಿ ಚೀಲಕ್ಕೆ ತುಂಬಿ ಪೆಟ್ರೋಲ್ ಸುರಿದು ಬೆಂಕಿ ಇಟ್ಟ ಎಂದು ನಾಗಣ್ಣ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p class="Subhead">ಏನಿದು ಪ್ರಕರಣ: ದಾವಣಗೆರೆ ತಾಲ್ಲೂಕಿನ ಲಕ್ಷ್ಮಿಪುರ ತಾಂಡ್ಯಾದ ನಾಗರಾಜ ನಾಯ್ಕ (50) ಎಂಬಾತ ನನನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಅಜ್ಜಂಪುರದ ಟಿ.ಎಚ್. ರಸ್ತೆಯ ಕಿರಾಳಮ್ಮ ದೇವರ ತೇರುಮನೆ ಸಮೀಪ ಬಸ್ ನಿಲ್ದಾಣದ ಪಕ್ಕದ ಪೆಟ್ಟಿಗೆ ಅಂಗಡಿ ಬಳಿ ಆ.23ರಂದು ಶವ ಪತ್ತೆಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>