<p>ಚಿಕ್ಕಮಗಳೂರು: ತಾಲ್ಲೂಕಿನ ಮತ್ತಾವರ ಗ್ರಾಮದ ಪ್ರಕೃತ್ (30) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನಾಗರಾಜ ಸಹಿತ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಮತ್ತಾವರ ಗ್ರಾಮದ ನಾಗರಾಜ, ಭೈರೇಗೌಡ, ಮತ್ತು ಚಂದ್ರೇಗೌಡ ಬಂಧಿತರು. ನಾಗರಾಜ ತೋಟದಲ್ಲಿ ತಲೆಮರೆಸಿಕೊಂಡಿರುವ ಸುಳಿವು ಸಿಕ್ಕಿತ್ತು. ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಶುಕ್ರವಾರ ಪತ್ತೆ ಮಾಡಲಾಗಿದೆ.</p>.<p>ಆರೋಪಿಗಳನ್ನು ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿದೆ.</p>.<p class="Subhead">ಏನಿದು ಪ್ರಕರಣ: ಮತ್ತಾವರದ ಪ್ರಕೃತ್ ಅವರನ್ನು ನ.3ರಂದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ತೋಟದ ಹಾದಿಯಲ್ಲಿ ರಕ್ತಸಿಕ್ತ ಮೃತದೇಹ ಪತ್ತೆಯಾಗಿತ್ತು.</p>.<p>ಗ್ರಾಮಾಂತರ ಠಾಣೆಯಲ್ಲಿ ಮೂವರ ವಿರುದ್ಧ ದೂರು ದಾಖಲಾಗಿತ್ತು. ಐಪಿಸಿ 302 (ಕೊಲೆ), 201 (ಸಾಕ್ಷ್ಯ ನಾಶ), 114 (ದುಷ್ಪ್ರೇರಕನ ಹಾಜರಿ), 34 (ಅಪರಾಧ ಸಂಚು) ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ತಾಲ್ಲೂಕಿನ ಮತ್ತಾವರ ಗ್ರಾಮದ ಪ್ರಕೃತ್ (30) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನಾಗರಾಜ ಸಹಿತ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಮತ್ತಾವರ ಗ್ರಾಮದ ನಾಗರಾಜ, ಭೈರೇಗೌಡ, ಮತ್ತು ಚಂದ್ರೇಗೌಡ ಬಂಧಿತರು. ನಾಗರಾಜ ತೋಟದಲ್ಲಿ ತಲೆಮರೆಸಿಕೊಂಡಿರುವ ಸುಳಿವು ಸಿಕ್ಕಿತ್ತು. ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಶುಕ್ರವಾರ ಪತ್ತೆ ಮಾಡಲಾಗಿದೆ.</p>.<p>ಆರೋಪಿಗಳನ್ನು ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿದೆ.</p>.<p class="Subhead">ಏನಿದು ಪ್ರಕರಣ: ಮತ್ತಾವರದ ಪ್ರಕೃತ್ ಅವರನ್ನು ನ.3ರಂದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ತೋಟದ ಹಾದಿಯಲ್ಲಿ ರಕ್ತಸಿಕ್ತ ಮೃತದೇಹ ಪತ್ತೆಯಾಗಿತ್ತು.</p>.<p>ಗ್ರಾಮಾಂತರ ಠಾಣೆಯಲ್ಲಿ ಮೂವರ ವಿರುದ್ಧ ದೂರು ದಾಖಲಾಗಿತ್ತು. ಐಪಿಸಿ 302 (ಕೊಲೆ), 201 (ಸಾಕ್ಷ್ಯ ನಾಶ), 114 (ದುಷ್ಪ್ರೇರಕನ ಹಾಜರಿ), 34 (ಅಪರಾಧ ಸಂಚು) ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>