ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ಕತ್ತು ಸೀಳಿ ಮಹಿಳೆಯ ಹತ್ಯೆ

Last Updated 17 ಫೆಬ್ರುವರಿ 2020, 17:56 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲೆಯ ಕಡೂರಿನ ಲಕ್ಷ್ಮೀಶ ನಗರದ ಮನೆಯಲ್ಲಿ ಕವಿತಾ(31) ಎಂಬವರ ಕತ್ತು ಸೀಳಿ ಕೊಲೆ ಮಾಡಲಾಗಿದೆ.
ರಾತ್ರಿ 7 ರಿಂದ 8 ಗಂಟೆ ಹೊತ್ತಿನಲ್ಲಿ ಕೃತ್ಯ ನಡೆದಿದೆ.

ಕವಿತಾ ಅವರು ದಂತವೈದ್ಯ ರೇವಂತ್ ಅವರ ಪತ್ನಿ. ದಂಪತಿಗೆ ಇಬ್ಬರು ಪತ್ರರು ಇದ್ದಾರೆ.

ದುಷ್ಕರ್ಮಿಗಳು ಕೋಣೆಗೆ ನುಗ್ಗಿ ಕವಿತಾ ಅವರ ಕುತ್ತಿಗೆಗೆ ಇರಿದಿದ್ದಾರೆ. ಕೋಣೆಯಲ್ಲಿ ರಕ್ತ ಸುರಿದಿದೆ. ಕೋಣೆಯ ಬೀರುವಿನಲ್ಲಿದ್ದ ಬೆಲೆಬಾಳುವ ಕಾಣೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರವೇಶ ದ್ವಾರ, ಹಿಂಬದಿ ಪ್ರದೇಶದ ಸಿಸಿ ಟಿವಿ ಕ್ಯಾಮೆರಾ ಫೂಟೇಜ್ ಗಳನ್ನು ಪೊಲೀಸರು ಪಡೆದುಕೊಂಡಿದ್ದಾರೆ.ದುಷ್ಕರ್ಮಿಗಳ ಪತ್ತೆಗೆ ತಲಾಶ್ ಆರಂಭಿಸಿದ್ದಾರೆ.

ಮರಣೋತ್ತರ ಪರೀಕ್ಷೆಗೆ ಶಿವಮೊಗ್ಗಕ್ಕೆ ಒಯ್ಯಲಾಗಿದೆ. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರುತಿ, ಕಡೂರು ಠಾಣೆ ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ. ಶ್ವಾನ ದಳ ಕರೆಸಲಾಗಿದೆ. ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT