ಆರೋಪಿಗಳು ಶವ ಎಸೆದ ಜಾಗವನ್ನು ಗುರುತಿಸಲು ವಿಫಲವಾಗಿರುವುದರಿಂದ ಶೋಧ ಕಾರ್ಯ ವಿಳಂಬವಾಯಿತು. ಮೂರು ದಿನ ಕಬ್ಬನ್ ಪಾರ್ಕ್ ಮತ್ತು ಅಶೋಕನಗರ ಪೊಲೀಸರು, ಮೂಡಿಗೆರೆಯ ಸಾಮಾಜಿಕ ಸಕ್ರಿಯ ಕಾರ್ಯಕರ್ತರು, ಸಮಾಜ ಸೇವಕ ಮೊಹಮ್ಮದ್ ಆರೀಫ್ ಹಾಗೂ ಸ್ಥಳೀಯರ ಸಹಕಾರದಿಂದ ಚಾರ್ಮಾಡಿ ಅಣ್ಣಪ್ಪ ಸ್ವಾಮಿ ದೇವಸ್ಥಾನದಿಂದ ಮುಂದಿನ ಪ್ರಪಾತ, ಸೋಮನಕಾಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಶವ ಹಾಕಿದ್ದ ಗೋಣಿಚೀಲ ಸಿಕ್ಕರೂ, ಮೃತದೇಹ ಪತ್ತೆಯಾಗಿರಲಿಲ್ಲ.