ಚಿಕ್ಕಮಗಳೂರು: ಕೊಲೆ ಪ್ರಕರಣದಲ್ಲಿ ಚಿಕ್ಕಮಗಳೂರು ತಾಲ್ಲೂಕಿನ ಹಿರೇಕೊಳಲೆಯ ಹೊಸಪುರದ ಸುನೀಲ್ (28) ಅಲಿಯಾಸ್ ಎಚ್.ಆರ್. ಹರೀಶ್ಕುಮಾರ್ಗೆ ಜೀವಾವಧಿ ಶಿಕ್ಷೆ, ಎರಡು ಲಕ್ಷ ರೂಪಾಯಿ ದಂಡವನ್ನು ಎರಡನೇ ಅಧಿಕ ಜಿಲ್ಲಾ – ಸೆಷನ್ಸ್ ಕೋರ್ಟ್ ವಿಧಿಸಿದೆ.
ನ್ಯಾಯಾಧೀಶರಾದ ಮಂಜುನಾಥ ಸಂಗ್ರೇಶಿ ಈ ಆದೇಶ ನೀಡಿದ್ದಾರೆ. ಮೃತನ ಪತ್ನಿಗೆ ದಂಡದ ಮೊತ್ತವನ್ನು ಪರಿಹಾರವಾಗಿ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಏನಿದು ಪ್ರಕರಣ: 2015 ಆ.19 ರಂದು ನಾಗೇಶ್ ಕೊಲೆಯಾಗಿತ್ತು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮನೆಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಸುನೀಲ್ ಮತ್ತು ನಾಗೇಶ್ ನಡುವೆ ಇಬ್ಬರ ನಡುವೆ ಜಗಳವಾಗಿತ್ತು. ಮನೆ ಬಳಿಗೆ ಬಂದು ನಾಗೇಶ್ ಅವರು ಬೈಯ್ಯುವಾಗ ಕುಪಿತಗೊಂಡ ಸುನೀಲ್ ಕತ್ತಿಯಿಂದ ಕುತ್ತಿಗೆಗೆ ಹೊಡೆದು ಕೊಲೆ ಮಾಡಿದ್ದ ಎಂದು ತನಿಖೆಯಲ್ಲಿ ಗೊತ್ತಾಗಿತ್ತು.
ಇನ್ಸ್ಪೆಕ್ಟರ್ ವಿನೋದ್ ಭಟ್ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎಸ್. ಮಮತಾ ಅವರು ವಾದ ಮಂಡಿಸಿದ್ದರು.