ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲೆ ಪ್ರಕರಣ: ಜೀವಾವಧಿ ಶಿಕ್ಷೆ, 2 ಲಕ್ಷ ದಂಡ

Last Updated 21 ಆಗಸ್ಟ್ 2021, 1:27 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಕೊಲೆ ಪ್ರಕರಣದಲ್ಲಿ ಚಿಕ್ಕಮಗಳೂರು ತಾಲ್ಲೂಕಿನ ಹಿರೇಕೊಳಲೆಯ ಹೊಸಪುರದ ಸುನೀಲ್‌ (28) ಅಲಿಯಾಸ್‌ ಎಚ್.ಆರ್‌. ಹರೀಶ್‌ಕುಮಾರ್‌ಗೆ ಜೀವಾವಧಿ ಶಿಕ್ಷೆ, ಎರಡು ಲಕ್ಷ ರೂಪಾಯಿ ದಂಡವನ್ನು ಎರಡನೇ ಅಧಿಕ ಜಿಲ್ಲಾ – ಸೆಷನ್ಸ್‌ ಕೋರ್ಟ್‌ ವಿಧಿಸಿದೆ.

ನ್ಯಾಯಾಧೀಶರಾದ ಮಂಜುನಾಥ ಸಂಗ್ರೇಶಿ ಈ ಆದೇಶ ನೀಡಿದ್ದಾರೆ. ಮೃತನ ಪತ್ನಿಗೆ ದಂಡದ ಮೊತ್ತವನ್ನು ಪರಿಹಾರವಾಗಿ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

ಏನಿದು ಪ್ರಕರಣ: 2015 ಆ.19 ರಂದು ನಾಗೇಶ್‌ ಕೊಲೆಯಾಗಿತ್ತು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮನೆಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಸುನೀಲ್‌ ಮತ್ತು ನಾಗೇಶ್‌ ನಡುವೆ ಇಬ್ಬರ ನಡುವೆ ಜಗಳವಾಗಿತ್ತು. ಮನೆ ಬಳಿಗೆ ಬಂದು ನಾಗೇಶ್‌ ಅವರು ಬೈಯ್ಯುವಾಗ ಕುಪಿತಗೊಂಡ ಸುನೀಲ್‌ ಕತ್ತಿಯಿಂದ ಕುತ್ತಿಗೆಗೆ ಹೊಡೆದು ಕೊಲೆ ಮಾಡಿದ್ದ ಎಂದು ತನಿಖೆಯಲ್ಲಿ ಗೊತ್ತಾಗಿತ್ತು.

ಇನ್‌ಸ್ಪೆಕ್ಟರ್‌ ವಿನೋದ್‌ ಭಟ್‌ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪಬ್ಲಿಕ್‌ ಪ್ರಾಸಿಕ್ಯೂಟರ್‌ ಬಿ.ಎಸ್‌. ಮಮತಾ ಅವರು ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT