‘ಶೃಂಗೇರಿ ತಾಲ್ಲೂಕಿನ ಹಾದಿ ಕೆರೂರು ಸರ್ವೆ ನಂಬರ್ 11ರಲ್ಲಿ 1090 ಎಕರೆ ಪ್ರದೇಶದಲ್ಲಿ 762 ಎಕರೆ ಅರಣ್ಯ, 328 ಎಕರೆ ಗೋಮಾಳ ಇದೆ. ಹಾದಿ ಗ್ರಾಮದ ಸರ್ವೆ ನಂಬರ್ 2ರಲ್ಲಿ 971 ಎಕರೆ ಪ್ರದೇಶದಲ್ಲಿ 734 ಎಕರೆ ಕಾಡು, 234 ಎಕರೆ ಕಾನು ಇದೆ. ತಹಶೀಲ್ದಾರ್ ಅವರು ಮೋಜಣಿ ಮತ್ತು ಅರಣ್ಯ ಇಲಾಖೆಯವರಿಗೆ ಪತ್ರ ಬರೆದಿದ್ದಾರೆ. ಆದರೆ, ಈವರೆಗೆ ಮೋಜಣಿ ಮಾಡಿಲ್ಲ. ಗೋಮಾಳ, ಕಾನು ಜಾಗವನ್ನು ಅರಣ್ಯಕ್ಕೆ ಸೇರಿಸುವ ಪ್ರಯತ್ನ ನಡೆದಿದೆ ಎಂದು ಅಲ್ಲಿನ ಜನರು ಆತಂಕದಲ್ಲಿದ್ದಾರೆ’ ಎಂದು ಹೇಳಿದರು.