<p><strong>ಬಾಳೆಹೊನ್ನೂರು (ಚಿಕ್ಕಮಗಳೂರು ಜಿಲ್ಲೆ)</strong>: ಇಲ್ಲಿನ ಮಸೀದಿಕೆರೆ ಬಳಿ ಮೃತಪಟ್ಟಿದ್ದ ಹಿಂದೂ ಯುವಕನ ಶವ ಸಂಸ್ಕಾರವನ್ನು ಮುಸ್ಲಿಂ ಯುವಕರು ನಡೆಸಿದರು.</p>.<p>ಮೆಣಸುಕೊಡಿಗೆ ನಿವಾಸಿ ರಮೇಶ್ ಮಸೀದಿಕೆರೆಯ ಪಾಳುಬಿದ್ದ ಮನೆಯಲ್ಲಿ ಮೂರ್ನಾಲ್ಕು ದಿನಗಳ ಹಿಂದೆ ಮೃತರಾಗಿದ್ದರು. ದುರ್ವಾಸನೆ ಹರಡಿದ್ದರಿಂದ ಅವರ ಸಾವಿನ ಬಗ್ಗೆ ಗೊತ್ತಾಗಿತ್ತು. ಸಂಬಂಧಿಕರು ಶವ ಸಂಸ್ಕಾರಕ್ಕೆ ಮುಂದಾಗಿರಲಿಲ್ಲ.</p>.<p>ತುರ್ತು ರಕ್ಷಣಾ ಪಡೆಯ ಮುಖ್ಯಸ್ಥ ಅಸ್ಲಾಂ ಅವರ ಜತೆಗೂಡಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಇಬ್ರಾಹಿಂ ಶಾಫಿ, ಮಸೀದಿಕೆರೆ ರಫೀಕ್, ಸುಲೈಮಾನ್, ನೀರುಗಂಟಿ ನಾಗೇಂದ್ರ ಅವರೆಲ್ಲ ಸೇರಿ ಆಂಬುಲೆನ್ಸ್ನಲ್ಲಿ ಬೈರೇಗುಡ್ಡದ ಹಿಂದೂ ರುದ್ರಭೂಮಿಗೆ ಒಯ್ದು ಹಿಂದೂ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರಿಸಿದರು.</p>.<p>ಪೊಲೀಸ್ ಅಧಿಕಾರಿಗಳಾದ ಮಂಜುನಾಥ್ ಹಾಗೂ ಧರ್ಮರಾಜ್ ಸಹ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಳೆಹೊನ್ನೂರು (ಚಿಕ್ಕಮಗಳೂರು ಜಿಲ್ಲೆ)</strong>: ಇಲ್ಲಿನ ಮಸೀದಿಕೆರೆ ಬಳಿ ಮೃತಪಟ್ಟಿದ್ದ ಹಿಂದೂ ಯುವಕನ ಶವ ಸಂಸ್ಕಾರವನ್ನು ಮುಸ್ಲಿಂ ಯುವಕರು ನಡೆಸಿದರು.</p>.<p>ಮೆಣಸುಕೊಡಿಗೆ ನಿವಾಸಿ ರಮೇಶ್ ಮಸೀದಿಕೆರೆಯ ಪಾಳುಬಿದ್ದ ಮನೆಯಲ್ಲಿ ಮೂರ್ನಾಲ್ಕು ದಿನಗಳ ಹಿಂದೆ ಮೃತರಾಗಿದ್ದರು. ದುರ್ವಾಸನೆ ಹರಡಿದ್ದರಿಂದ ಅವರ ಸಾವಿನ ಬಗ್ಗೆ ಗೊತ್ತಾಗಿತ್ತು. ಸಂಬಂಧಿಕರು ಶವ ಸಂಸ್ಕಾರಕ್ಕೆ ಮುಂದಾಗಿರಲಿಲ್ಲ.</p>.<p>ತುರ್ತು ರಕ್ಷಣಾ ಪಡೆಯ ಮುಖ್ಯಸ್ಥ ಅಸ್ಲಾಂ ಅವರ ಜತೆಗೂಡಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಇಬ್ರಾಹಿಂ ಶಾಫಿ, ಮಸೀದಿಕೆರೆ ರಫೀಕ್, ಸುಲೈಮಾನ್, ನೀರುಗಂಟಿ ನಾಗೇಂದ್ರ ಅವರೆಲ್ಲ ಸೇರಿ ಆಂಬುಲೆನ್ಸ್ನಲ್ಲಿ ಬೈರೇಗುಡ್ಡದ ಹಿಂದೂ ರುದ್ರಭೂಮಿಗೆ ಒಯ್ದು ಹಿಂದೂ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರಿಸಿದರು.</p>.<p>ಪೊಲೀಸ್ ಅಧಿಕಾರಿಗಳಾದ ಮಂಜುನಾಥ್ ಹಾಗೂ ಧರ್ಮರಾಜ್ ಸಹ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>