<p><strong>ಚಿಕ್ಕಮಗಳೂರು: </strong>ರಾಜ್ಯ ಚುನಾವಣಾ ಆಯೋಗವು ಸೋಮವಾರ ನಗರಸಭೆ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದ್ದು, ಡಿ. 27ರಂದು ಮತದಾನ ನಿಗದಿಯಾಗಿದೆ.</p>.<p>ಜಿಲ್ಲಾಧಿಕಾರಿ ಡಿ.8ರಂದು ಚುನಾವಣೆ ಅಧಿಸೂಚನೆ ಹೊಡಿಸುವರು. ನಾಮಪತ್ರ ಸಲ್ಲಿಸಲು ಡಿ.15 ಕೊನೆ ದಿನ.</p>.<p>ಡಿ.16ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಡಿ.18 ಕಡೆ ದಿನ.</p>.<p>ಡಿ.27ರಂದು ಬೆಳಿಗ್ಗೆ 7ರಿಂದ ಸಂಜೆ 5ಗಂಟೆವರೆಗೆ ಮತದಾನ ನಡೆಯಲಿದೆ. ಅಗತ್ಯವಿದ್ದ ಕಡೆಗಳಲ್ಲಿ ಡಿ. 29ರಂದು ಮರು ಮತದಾನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.</p>.<p>ಡಿ.30ರಂದು ಬೆಳಿಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ನಡೆಯಲಿದೆ. 30ರಂದು ಚುನಾವಣಾ ಪ್ರಕ್ರಿಯೆ ಅಂತ್ಯಗೊಳ್ಳಲಿದೆ.</p>.<p>ನಗರದ ಎಲ್ಲ 35 ವಾರ್ಡ್ಗಳಿಗೆ ಚುನಾವಣೆ ನಡೆಯಲಿದೆ. ಡಿ.8 ರಿಂದ 30ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.</p>.<p>ವೆಚ್ಚದ ಮಿತಿ: ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ನಗರಸಭೆಗಳಲ್ಲಿ ತಲಾ ₹ 2ಲಕ್ಷ ವೆಚ್ಚ ಮಿತಿ ನಿಗದಿಪಡಿಸಲಾಗಿದೆ.</p>.<p>ಚಿಕ್ಕಮಗಳೂರು ನಗರಸಭೆ ಸದಸ್ಯರ ಅವಧಿ 2019ರ ಮಾರ್ಚ್ನಲ್ಲಿ ಮುಗಿದಿತ್ತು. ಮೀಸಲಾತಿ ವಿಚಾರದಲ್ಲಿ ಕೆಲವರು ಕೋರ್ಟ್ ಮೆಟ್ಟಿಲು ಏರಿದ್ದರು. ಹೀಗಾಗಿ, ಚುನಾವಣೆ ಬಾಕಿ ಉಳಿದಿತ್ತು.</p>.<p><strong>‘ಕೋರ್ಟ್ನಲ್ಲಿ ವಿಚಾರಣೆ ಇಂದು’</strong></p>.<p>‘ಮೀಸಲಾತಿ ವಿಚಾರ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲು ಏರಿದ್ದೇವೆ. ನ.30ರಂದು ಕೋರ್ಟ್ನಲ್ಲಿ ವಿಚಾರಣೆ ಇದೆ’ ಎಂದು ನಗರಸಭೆ ಮಾಜಿ ಸದಸ್ಯ ಮುತ್ತಯ್ಯ ತಿಳಿಸಿದರು.</p>.<p>‘ವಾರ್ಡ್ ನಂ 3, 9, 20 ಹಾಗೂ 33ರ ಮೀಸಲಾತಿಗೆ ಸಂಬಂಧಿಸಿದಂತೆ ತಕರಾರು ಎತ್ತಿದ್ದೇವೆ. ಜಯಣ್ಣ, ಸುಧೀರ್, ಮುತ್ತಯ್ಯ, ಶ್ರೀನಿವಾಸ ಕೋರ್ಟ್ ಮೊರೆ ಹೋಗಿದ್ದೇವೆ’ ಎಂದು ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>ರಾಜ್ಯ ಚುನಾವಣಾ ಆಯೋಗವು ಸೋಮವಾರ ನಗರಸಭೆ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದ್ದು, ಡಿ. 27ರಂದು ಮತದಾನ ನಿಗದಿಯಾಗಿದೆ.</p>.<p>ಜಿಲ್ಲಾಧಿಕಾರಿ ಡಿ.8ರಂದು ಚುನಾವಣೆ ಅಧಿಸೂಚನೆ ಹೊಡಿಸುವರು. ನಾಮಪತ್ರ ಸಲ್ಲಿಸಲು ಡಿ.15 ಕೊನೆ ದಿನ.</p>.<p>ಡಿ.16ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಡಿ.18 ಕಡೆ ದಿನ.</p>.<p>ಡಿ.27ರಂದು ಬೆಳಿಗ್ಗೆ 7ರಿಂದ ಸಂಜೆ 5ಗಂಟೆವರೆಗೆ ಮತದಾನ ನಡೆಯಲಿದೆ. ಅಗತ್ಯವಿದ್ದ ಕಡೆಗಳಲ್ಲಿ ಡಿ. 29ರಂದು ಮರು ಮತದಾನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.</p>.<p>ಡಿ.30ರಂದು ಬೆಳಿಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ನಡೆಯಲಿದೆ. 30ರಂದು ಚುನಾವಣಾ ಪ್ರಕ್ರಿಯೆ ಅಂತ್ಯಗೊಳ್ಳಲಿದೆ.</p>.<p>ನಗರದ ಎಲ್ಲ 35 ವಾರ್ಡ್ಗಳಿಗೆ ಚುನಾವಣೆ ನಡೆಯಲಿದೆ. ಡಿ.8 ರಿಂದ 30ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.</p>.<p>ವೆಚ್ಚದ ಮಿತಿ: ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ನಗರಸಭೆಗಳಲ್ಲಿ ತಲಾ ₹ 2ಲಕ್ಷ ವೆಚ್ಚ ಮಿತಿ ನಿಗದಿಪಡಿಸಲಾಗಿದೆ.</p>.<p>ಚಿಕ್ಕಮಗಳೂರು ನಗರಸಭೆ ಸದಸ್ಯರ ಅವಧಿ 2019ರ ಮಾರ್ಚ್ನಲ್ಲಿ ಮುಗಿದಿತ್ತು. ಮೀಸಲಾತಿ ವಿಚಾರದಲ್ಲಿ ಕೆಲವರು ಕೋರ್ಟ್ ಮೆಟ್ಟಿಲು ಏರಿದ್ದರು. ಹೀಗಾಗಿ, ಚುನಾವಣೆ ಬಾಕಿ ಉಳಿದಿತ್ತು.</p>.<p><strong>‘ಕೋರ್ಟ್ನಲ್ಲಿ ವಿಚಾರಣೆ ಇಂದು’</strong></p>.<p>‘ಮೀಸಲಾತಿ ವಿಚಾರ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲು ಏರಿದ್ದೇವೆ. ನ.30ರಂದು ಕೋರ್ಟ್ನಲ್ಲಿ ವಿಚಾರಣೆ ಇದೆ’ ಎಂದು ನಗರಸಭೆ ಮಾಜಿ ಸದಸ್ಯ ಮುತ್ತಯ್ಯ ತಿಳಿಸಿದರು.</p>.<p>‘ವಾರ್ಡ್ ನಂ 3, 9, 20 ಹಾಗೂ 33ರ ಮೀಸಲಾತಿಗೆ ಸಂಬಂಧಿಸಿದಂತೆ ತಕರಾರು ಎತ್ತಿದ್ದೇವೆ. ಜಯಣ್ಣ, ಸುಧೀರ್, ಮುತ್ತಯ್ಯ, ಶ್ರೀನಿವಾಸ ಕೋರ್ಟ್ ಮೊರೆ ಹೋಗಿದ್ದೇವೆ’ ಎಂದು ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>