ನಳಿನ್ಕುಮಾರ್ ಕಟೀಲ್ ಮಾತನಾಡಿ, ‘ಧರ್ಮ ನೇಮೋತ್ಸವ ಪ್ರತಿ 12 ವರ್ಷಕ್ಕೊಮ್ಮೆ ನಡೆಯಬೇಕಿತ್ತು. ನಾನಾ ಕಾರಣಗಳಿಂದ 60 ವರ್ಷ ನಡೆದಿರಲಿಲ್ಲ. ದೈವಜ್ಞರ ಸೂಚನೆಯಂತೆ ಈ ಬಾರಿ ಹಮ್ಮಿಕೊಳ್ಳಲಾಗಿದೆ. ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಕಾರ್ಯಕ್ರಮ ಮಾಡಲಾಗುವುದು. ಮುಖ್ಯಮಂತ್ರಿ ಸೇರಿದಂತೆ ರಾಜಕೀಯ, ಧಾರ್ಮಿಕ, ಸಾಮಾಜಿಕ ನಾಯಕರಿಗೆ ಆಹ್ವಾನ ಪತ್ರ ನೀಡಲಾಗಿದೆ’ ಎಂದು ಹೇಳಿದರು.