2016ರಲ್ಲಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಟ್ಟಣಕ್ಕೆ ಭೇಟಿ ನೀಡಿದ್ದ ವೇಳೆ ಆಗ ವಿಧಾನ ಪರಿಷತ್ ಸದಸ್ಯರಾಗಿದ್ದ ಎಂ.ಶ್ರೀನಿವಾಸ್ ಅವರು ಈ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ವಿನಂತಿಸಿದ್ದರು. ನಂತರ ₹4.90ಕೋಟಿ ಅನುದಾನ ಬಿಡುಗಡೆಯಾಗಿದ್ದು, 2017ರಲ್ಲಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದ್ದರು. ನಿರ್ಮಾಣಕ್ಕೆ ₹20ಕೋಟಿ ವೆಚ್ಚ ತಗಲುವುದಾಗಿ ತಾಂತ್ರಿಕ ಸಮಿತಿ ವರದಿ ನೀಡಿತ್ತು. ನಂತರ ಸೇತುವೆ ನಿರ್ಮಾಣಕ್ಕೆ ₹34.85ಕೋಟಿ ಬಿಡುಗಡೆಯಾಯಿತು. 2018ರಲ್ಲಿ ಆರಂಭವಾಗಿದ್ದ ಕಾಮಗಾರಿ, 2021ರಲ್ಲಿ ಪೂರ್ಣಗೊಳ್ಳಬೇಕಿತ್ತು. ಆದರೆ ಇದುವರೆಗೂ ಕಾಮಗಾರಿ ಮುಗಿದಿಲ್ಲ.