ನಂತರ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ಟಿ.ಡಿ.ರಾಜೇಗೌಡ, ‘ಇಲ್ಲಿನ ಪಟ್ಟಣ ಪಂಚಾಯಿತಿಗೆ ನಡೆದ ಚುನಾವಣೆಯಲ್ಲಿ ಜನರು ಕಾಂಗ್ರೆಸ್ಗೆ ನಿರೀಕ್ಷೆಗೂ ಮೀರಿ ಫಲಿತಾಂಶ ನೀಡಿದ್ದಾರೆ, ಅಧಿಕಾರ ಶಾಶ್ವತವಲ್ಲ. ಅಧಿಕಾರವಿದ್ದಾಗ ಜನರು ಶಾಶ್ವತವಾಗಿ ನೆನಪಿಟ್ಟುಕೊಳ್ಳುವ ಕೆಲಸ ಮಾಡಬೇಕು. ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ಸದಸ್ಯರು ಒಟ್ಟಾಗಿ ಅಭಿವೃದ್ಧಿಗೆ ಶ್ರಮಿಸಬೇಕು. ಹಿರಿಯರ ಮಾರ್ಗದರ್ಶನ ಪಡೆದ ಉತ್ತಮ ಆಡಳಿತ ನೀಡಬೇಕು’ ಎಂದು ಹೇಳಿದರು.