<p>ನರಸಿಂಹರಾಜಪುರ: ಕನ್ನಡದ ಕೆಲಸದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ತಹಶೀಲ್ದಾರ್ ನೂರುಲ್ ಹುದಾ ಹೇಳಿದರು.</p>.<p>ಕಡೂರಿನಲ್ಲಿ ಏ.10ರಿಂದ 12ರವರೆಗೆ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲೆಯಾದ್ಯಂತ ಸಂಚರಿಸುವ ರಥ ಬುಧವಾರ ಪಟ್ಟಣಕ್ಕೆ ಭೇಟಿ ನೀಡಿದ ವೇಳೆ ಅವರು ಮಾತನಾಡಿದರು.</p>.<p>ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಎಚ್. ಪೂರ್ಣೇಶ್ ಮಾತನಾಡಿ, ಸಾಹಿತ್ಯ ರಥದ ಜವಾಬ್ದಾರಿಯನ್ನು ಜಿಲ್ಲೆಯಾದ್ಯಂತ ಮಹಿಳಾ ಘಟಕಕ್ಕೆ ನೀಡಿದ್ದು ಮಹಿಳೆಯರು ಸಾಹಿತ್ಯ ಸಮ್ಮೇಳನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಮ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯ ನಂಜುಂಡಸ್ವಾಮಿ ಮಾತನಾಡಿದರು.</p>.<p>ಜುಬೇದಾ, ಶಶಿಕಲಾ, ಸವಿತಾ, ಕನ್ನಡ ಸಾಹಿತ್ಯ ಪರಿಷತ್ ತರೀಕೆರೆ ಮಹಿಳಾ ಘಟಕದ ಅಧ್ಯಕ್ಷೆ ಸುನೀತಾ, ಕಡೂರಿನ ಲತಾ ರಾಜಶೇಖರ್, ಪದ್ಮಾ ಸೂರಿಶ್ರೀನಿವಾಸ್, ಎಸ್.ಎಸ್.ಸಂತೋಷ್ ಕುಮಾರ್, ಇಮ್ರಾನ್ ಅಹಮ್ಮದ್ ಬೇಗ್, ಶಾಶ್ವತಿ ಮಹಿಳಾ ಒಕ್ಕಲಿಗರ ಸಂಘದ ಶ್ಯಾಮಲಾ ಸತೀಶ್, ಚೈತ್ರಾ ರಮೇಶ್, ಶೀಲಾ ಸುಂದರೇಶ್, ಜಾನಪದ ಪರಿಷತ್ ನ ಜಯಂತಿ ಇದ್ದರು. ಸಾಹಿತ್ಯ ರಥದ ಧ್ವಜವನ್ನು ಹಸ್ತಾಂತರಿಸಲಾಯಿತು. ಸಮ್ಮೇಳನಾಧ್ಯಕ್ಷೆ ಜಯಮ್ಮ ಅವರಿಗೆ ಆಹ್ವಾನ ಪತ್ರಿಕೆ ನೀಡಲಾಯಿತು. ಜಯಂತಿ ಮತ್ತು ತಂಡದವರು ಕನ್ನಡ ಗೀತೆ ಹಾಡಿದರು. ಭುವನೇಶ್ವರಿ ದೇವಿಗೆ ಆರತಿ ಎತ್ತಿ ಪುಷ್ಪಾರ್ಚನೆ ಮಾಡಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-126-1411199053</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನರಸಿಂಹರಾಜಪುರ: ಕನ್ನಡದ ಕೆಲಸದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ತಹಶೀಲ್ದಾರ್ ನೂರುಲ್ ಹುದಾ ಹೇಳಿದರು.</p>.<p>ಕಡೂರಿನಲ್ಲಿ ಏ.10ರಿಂದ 12ರವರೆಗೆ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲೆಯಾದ್ಯಂತ ಸಂಚರಿಸುವ ರಥ ಬುಧವಾರ ಪಟ್ಟಣಕ್ಕೆ ಭೇಟಿ ನೀಡಿದ ವೇಳೆ ಅವರು ಮಾತನಾಡಿದರು.</p>.<p>ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಎಚ್. ಪೂರ್ಣೇಶ್ ಮಾತನಾಡಿ, ಸಾಹಿತ್ಯ ರಥದ ಜವಾಬ್ದಾರಿಯನ್ನು ಜಿಲ್ಲೆಯಾದ್ಯಂತ ಮಹಿಳಾ ಘಟಕಕ್ಕೆ ನೀಡಿದ್ದು ಮಹಿಳೆಯರು ಸಾಹಿತ್ಯ ಸಮ್ಮೇಳನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಮ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯ ನಂಜುಂಡಸ್ವಾಮಿ ಮಾತನಾಡಿದರು.</p>.<p>ಜುಬೇದಾ, ಶಶಿಕಲಾ, ಸವಿತಾ, ಕನ್ನಡ ಸಾಹಿತ್ಯ ಪರಿಷತ್ ತರೀಕೆರೆ ಮಹಿಳಾ ಘಟಕದ ಅಧ್ಯಕ್ಷೆ ಸುನೀತಾ, ಕಡೂರಿನ ಲತಾ ರಾಜಶೇಖರ್, ಪದ್ಮಾ ಸೂರಿಶ್ರೀನಿವಾಸ್, ಎಸ್.ಎಸ್.ಸಂತೋಷ್ ಕುಮಾರ್, ಇಮ್ರಾನ್ ಅಹಮ್ಮದ್ ಬೇಗ್, ಶಾಶ್ವತಿ ಮಹಿಳಾ ಒಕ್ಕಲಿಗರ ಸಂಘದ ಶ್ಯಾಮಲಾ ಸತೀಶ್, ಚೈತ್ರಾ ರಮೇಶ್, ಶೀಲಾ ಸುಂದರೇಶ್, ಜಾನಪದ ಪರಿಷತ್ ನ ಜಯಂತಿ ಇದ್ದರು. ಸಾಹಿತ್ಯ ರಥದ ಧ್ವಜವನ್ನು ಹಸ್ತಾಂತರಿಸಲಾಯಿತು. ಸಮ್ಮೇಳನಾಧ್ಯಕ್ಷೆ ಜಯಮ್ಮ ಅವರಿಗೆ ಆಹ್ವಾನ ಪತ್ರಿಕೆ ನೀಡಲಾಯಿತು. ಜಯಂತಿ ಮತ್ತು ತಂಡದವರು ಕನ್ನಡ ಗೀತೆ ಹಾಡಿದರು. ಭುವನೇಶ್ವರಿ ದೇವಿಗೆ ಆರತಿ ಎತ್ತಿ ಪುಷ್ಪಾರ್ಚನೆ ಮಾಡಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-126-1411199053</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>