<p><strong>ನರಸಿಂಹರಾಜಪುರ</strong>: ಪಟ್ಟಣದ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ 34ನೇ ವರ್ಷದ ಅಯ್ಯಪ್ಪಸ್ವಾಮಿ ದೀಪೋತ್ಸವ, ನಾಗ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಸಂಘದ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯಿತು.</p>.<p>ದೀಪೋತ್ಸವದ ಪ್ರಯುಕ್ತ ಬೆಳಿಗ್ಗೆ ಧ್ವಜಾರೋಹಣ, ಗಣಹೋಮ, ನಾಗರಾಜ ಹೋಮ, ಸುಬ್ರಹ್ಮಣ್ಯ ಹೋಮ, ಅಯ್ಯಪ್ಪಸ್ವಾಮಿ ಹೋಮ, ತುಪ್ಪದ ಅಭಿಷೇಕ, ಬಳಿಕ ಸತ್ಯನಾರಾಯಣ ಪೂಜೆ ನಡೆಯಿತು. ಮಧ್ಯಾಹ್ನ ಸಾಮೂಹಿಕ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಎನ್.ಜಗದೀಶ್ ಭಟ್, ಕೆ.ನಾಗಭೂಷಣ್ ನೇತೃತ್ವದಲ್ಲಿ ಪೂಜಾ ವಿಧಿಗಳು ನಡೆದವು.</p>.<p>ಅಯ್ಯಪ್ಪಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷ ಸೋಮಶೇಖರ್, ಪ್ರಧಾನ ಕಾರ್ಯದರ್ಶಿ ಕೆ.ಸಂತೋಷ್, ಖಜಾಂಚಿ ಮಂಜುನಾಥ್ ಲಾಡ್, ಡಿ.ಜಿ.ಶ್ರೀನಿವಾಸ್, ಲೋಕೇಶ್ ಗುರುಸ್ವಾಮಿ, ಪಿ.ಆರ್.ಸುಕುಮಾರ್, ಪ್ರದೀಪ್ ಕುಮಾರ್, ರಾಮಕೃಷ್ಣ, ಆರ್.ಶಂಕರ್ ಭಾಗವಹಿಸಿದ್ದರು.</p>.<p>ಶಾಸಕ ಟಿ.ಡಿ.ರಾಜೇಗೌಡ, ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಅವರನ್ನು ದೇವಸ್ಥಾನ ಸಮಿತಿಯಿಂದ ಅಭಿನಂದಿಸಲಾಯಿತು.</p>.<p>ಸಂಜೆ ಪೇಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಅಯ್ಯಪ್ಪಸ್ವಾಮಿ ದೇವಸ್ಥಾನದವರೆಗೆ ಪಲ್ಲಕ್ಕಿ ಮೆರವಣಿಗೆ ನಡೆಯಿತು. ವಿರಾಟ್ ವಿಶ್ವಕರ್ಮ ಚಂಡೆ ಬಳಗ ಮೆರವಣಿಗೆಗೆ ಮೆರಗುತಂದಿತು. ರಾತ್ರಿ ರಾಗಮಯೂರಿ ಅಕಾಡೆಮಿಯಿಂದ ಭರತನಾಟ್ಯ ಆಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಸಿಂಹರಾಜಪುರ</strong>: ಪಟ್ಟಣದ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ 34ನೇ ವರ್ಷದ ಅಯ್ಯಪ್ಪಸ್ವಾಮಿ ದೀಪೋತ್ಸವ, ನಾಗ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಸಂಘದ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯಿತು.</p>.<p>ದೀಪೋತ್ಸವದ ಪ್ರಯುಕ್ತ ಬೆಳಿಗ್ಗೆ ಧ್ವಜಾರೋಹಣ, ಗಣಹೋಮ, ನಾಗರಾಜ ಹೋಮ, ಸುಬ್ರಹ್ಮಣ್ಯ ಹೋಮ, ಅಯ್ಯಪ್ಪಸ್ವಾಮಿ ಹೋಮ, ತುಪ್ಪದ ಅಭಿಷೇಕ, ಬಳಿಕ ಸತ್ಯನಾರಾಯಣ ಪೂಜೆ ನಡೆಯಿತು. ಮಧ್ಯಾಹ್ನ ಸಾಮೂಹಿಕ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಎನ್.ಜಗದೀಶ್ ಭಟ್, ಕೆ.ನಾಗಭೂಷಣ್ ನೇತೃತ್ವದಲ್ಲಿ ಪೂಜಾ ವಿಧಿಗಳು ನಡೆದವು.</p>.<p>ಅಯ್ಯಪ್ಪಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷ ಸೋಮಶೇಖರ್, ಪ್ರಧಾನ ಕಾರ್ಯದರ್ಶಿ ಕೆ.ಸಂತೋಷ್, ಖಜಾಂಚಿ ಮಂಜುನಾಥ್ ಲಾಡ್, ಡಿ.ಜಿ.ಶ್ರೀನಿವಾಸ್, ಲೋಕೇಶ್ ಗುರುಸ್ವಾಮಿ, ಪಿ.ಆರ್.ಸುಕುಮಾರ್, ಪ್ರದೀಪ್ ಕುಮಾರ್, ರಾಮಕೃಷ್ಣ, ಆರ್.ಶಂಕರ್ ಭಾಗವಹಿಸಿದ್ದರು.</p>.<p>ಶಾಸಕ ಟಿ.ಡಿ.ರಾಜೇಗೌಡ, ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಅವರನ್ನು ದೇವಸ್ಥಾನ ಸಮಿತಿಯಿಂದ ಅಭಿನಂದಿಸಲಾಯಿತು.</p>.<p>ಸಂಜೆ ಪೇಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಅಯ್ಯಪ್ಪಸ್ವಾಮಿ ದೇವಸ್ಥಾನದವರೆಗೆ ಪಲ್ಲಕ್ಕಿ ಮೆರವಣಿಗೆ ನಡೆಯಿತು. ವಿರಾಟ್ ವಿಶ್ವಕರ್ಮ ಚಂಡೆ ಬಳಗ ಮೆರವಣಿಗೆಗೆ ಮೆರಗುತಂದಿತು. ರಾತ್ರಿ ರಾಗಮಯೂರಿ ಅಕಾಡೆಮಿಯಿಂದ ಭರತನಾಟ್ಯ ಆಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>