<p>ನರಸಿಂಹರಾಜಪುರ: ‘ಮಕ್ಕಳಲ್ಲಿ ವ್ಯವಹಾರ ಜ್ಞಾನ ಬೆಳೆಯಲಿ ಎಂಬ ಕಾರಣಕ್ಕೆ ಬೇಸಿಗೆ ಶಿಬಿರದಲ್ಲಿ ಮೆಟ್ರಿಕ್ ಮೇಳ ಆಯೋಜಿಸಲಾಗಿದೆ’ ಎಂದು ರಾಗಮಯೂರಿ ಅಕಾಡೆಮಿ ನಿರ್ದೇಶಕಿ ಅಂಕಿತ ಪ್ರಜ್ವಲ್ ಹೇಳಿದರು.</p>.<p>ಪಟ್ಟಣದ ಅಗ್ರಹಾರದ ಅನ್ನಪೂರ್ಣಮ್ಮ ರಂಗನಾಥ ಸಭಾಂಗಣದಲ್ಲಿ ಸೋಮವಾರ ರಾಗಯಮೂರಿ ಅಕಾಡೆಮಿ ಆಯೋಜಿಸಿರುವ 10 ದಿನಗಳ ಬೇಸಿಗೆ ಶಿಬಿರದಲ್ಲಿ 3ನೇ ದಿನ ಮಕ್ಕಳಿಗಾಗಿ ನಡೆದ ‘ಮೆಟ್ರಿಕ್ ಮೇಳದ ಸಮಾರೋಪ ಸಮಾರಂಭ’ದಲ್ಲಿ ಅವರು ಮಾತನಾಡಿದರು.</p>.<p>ಮಕ್ಕಳ ಸಂತೆಯಲ್ಲಿ 3 ಗುಂಪುಗಳಾಗಿ ಮಾಡಲಾಗಿದ್ದು, ಮಕ್ಕಳು ತಮ್ಮ ಮನೆಯಲ್ಲಿ ಬೆಳೆದ ತರಕಾರಿ, ಹಣ್ಣು, ಸಿಹಿ ಹಾಗೂ ಕಾರ ತಿಂಡಿಗಳು, ಜ್ಯೂಸ್, ಮಾವಿನ ಕಾಯಿ ತಂದು ಮಾರಾಟ ಮಾಡಿದ್ದಾರೆ. ಇದರಿಂದ ಮಕ್ಕಳಿಗೆ ವಸ್ತುಗಳನ್ನು ಹೇಗೆ ಮಾರಾಟ ಮಾಡಬೇಕು ಎಂಬ ಜ್ಞಾನ ಸಿಕ್ಕಿದೆ ಎಂದರು.</p>.<p>ಪೋಷಕಿ ನಂದಿನಿ ಆಲಂದೂರು ಮಾತನಾಡಿ, ಮಕ್ಕಳ ಸಂತೆ ಉತ್ತಮ ಕಾರ್ಯಕ್ರಮವಾಗಿದೆ. ಮಕ್ಕಳಲ್ಲಿ ವ್ಯವಹಾರ ಜ್ಞಾನ ಸಿಗುತ್ತಿದೆ. ಮುಂದಿನ ದಿನಗಳಲ್ಲಿ ಮಕ್ಕಳಿಗೆ ಹಣಕಾಸಿನ ವ್ಯವಹಾರ ಮಾಡಲು ತರಬೇತಿ ಸಿಕ್ಕಿದೆ ಎಂದರು.</p>.<p>ಪೋಷಕರಾದ ಅಭಿನವ ಗಿರಿರಾಜ್, ಸುಧಾಕರ್ ಮಾತನಾಡಿದರು. ಮಕ್ಕಳ ಸಂತೆಯಲ್ಲಿ ಭಾಗವಹಿಸಿದ್ದ ಮಕ್ಕಳು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನರಸಿಂಹರಾಜಪುರ: ‘ಮಕ್ಕಳಲ್ಲಿ ವ್ಯವಹಾರ ಜ್ಞಾನ ಬೆಳೆಯಲಿ ಎಂಬ ಕಾರಣಕ್ಕೆ ಬೇಸಿಗೆ ಶಿಬಿರದಲ್ಲಿ ಮೆಟ್ರಿಕ್ ಮೇಳ ಆಯೋಜಿಸಲಾಗಿದೆ’ ಎಂದು ರಾಗಮಯೂರಿ ಅಕಾಡೆಮಿ ನಿರ್ದೇಶಕಿ ಅಂಕಿತ ಪ್ರಜ್ವಲ್ ಹೇಳಿದರು.</p>.<p>ಪಟ್ಟಣದ ಅಗ್ರಹಾರದ ಅನ್ನಪೂರ್ಣಮ್ಮ ರಂಗನಾಥ ಸಭಾಂಗಣದಲ್ಲಿ ಸೋಮವಾರ ರಾಗಯಮೂರಿ ಅಕಾಡೆಮಿ ಆಯೋಜಿಸಿರುವ 10 ದಿನಗಳ ಬೇಸಿಗೆ ಶಿಬಿರದಲ್ಲಿ 3ನೇ ದಿನ ಮಕ್ಕಳಿಗಾಗಿ ನಡೆದ ‘ಮೆಟ್ರಿಕ್ ಮೇಳದ ಸಮಾರೋಪ ಸಮಾರಂಭ’ದಲ್ಲಿ ಅವರು ಮಾತನಾಡಿದರು.</p>.<p>ಮಕ್ಕಳ ಸಂತೆಯಲ್ಲಿ 3 ಗುಂಪುಗಳಾಗಿ ಮಾಡಲಾಗಿದ್ದು, ಮಕ್ಕಳು ತಮ್ಮ ಮನೆಯಲ್ಲಿ ಬೆಳೆದ ತರಕಾರಿ, ಹಣ್ಣು, ಸಿಹಿ ಹಾಗೂ ಕಾರ ತಿಂಡಿಗಳು, ಜ್ಯೂಸ್, ಮಾವಿನ ಕಾಯಿ ತಂದು ಮಾರಾಟ ಮಾಡಿದ್ದಾರೆ. ಇದರಿಂದ ಮಕ್ಕಳಿಗೆ ವಸ್ತುಗಳನ್ನು ಹೇಗೆ ಮಾರಾಟ ಮಾಡಬೇಕು ಎಂಬ ಜ್ಞಾನ ಸಿಕ್ಕಿದೆ ಎಂದರು.</p>.<p>ಪೋಷಕಿ ನಂದಿನಿ ಆಲಂದೂರು ಮಾತನಾಡಿ, ಮಕ್ಕಳ ಸಂತೆ ಉತ್ತಮ ಕಾರ್ಯಕ್ರಮವಾಗಿದೆ. ಮಕ್ಕಳಲ್ಲಿ ವ್ಯವಹಾರ ಜ್ಞಾನ ಸಿಗುತ್ತಿದೆ. ಮುಂದಿನ ದಿನಗಳಲ್ಲಿ ಮಕ್ಕಳಿಗೆ ಹಣಕಾಸಿನ ವ್ಯವಹಾರ ಮಾಡಲು ತರಬೇತಿ ಸಿಕ್ಕಿದೆ ಎಂದರು.</p>.<p>ಪೋಷಕರಾದ ಅಭಿನವ ಗಿರಿರಾಜ್, ಸುಧಾಕರ್ ಮಾತನಾಡಿದರು. ಮಕ್ಕಳ ಸಂತೆಯಲ್ಲಿ ಭಾಗವಹಿಸಿದ್ದ ಮಕ್ಕಳು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>