<p>ಸಿಂಸೆ(ಎನ್.ಆರ್.ಪುರ): ತಾಲ್ಲೂಕಿನ ಗಾಯಿತ್ರಿ ವಿಶ್ವಕರ್ಮ ಮಹಿಳಾ ಸಂಘದ ಸದಸ್ಯರು ಸಿಂಸೆಯ ವಿಶ್ವಕರ್ಮ ಸಮುದಾಯ ಭವನದಲ್ಲಿ ಶುಕ್ರವಾರ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ನೆರವೇರಿಸಿದರು.</p>.<p>ಪಟ್ಟಣದ ಕಾಳಿಕಾಂಬ ದೇವಸ್ಥಾನದ ಪುರೋಹಿತರಾದ ಶಿವಶಂಕರ ಆಚಾರ್ಯ ಪೂಜಾ ಕಾರ್ಯ ನೆರವೇರಿಸಿದರು.</p>.<p>ಗಾಯಿತ್ರಿ ವಿಶ್ವಕರ್ಮ ಮಹಿಳಾ ಸಂಘದ ಅಧ್ಯಕ್ಷೆ ಜಯಶ್ರೀ ಕೃಷ್ಣಯ್ಯ ಆಚಾರ್ಯ, ಕಾರ್ಯದರ್ಶಿ ಸುಮತಿ ಆಚಾರ್ಯ, ಖಜಾಂಚಿ ಜಯಲಕ್ಷ್ಮೀ ಆಚಾರ್ಯ ಹಾಗೂ ಸದಸ್ಯರು ಇದ್ದರು.</p>.<p><strong>ಶೃಂಗೇರಿ ಕ್ಷೇತ್ರಮಟ್ಟದ ವಿಶ್ವಕರ್ಮ ಸಮಾಜದ ವಾರ್ಷಿಕೋತ್ಸವ</strong>:</p>.<p>ವಿಶ್ವಕರ್ಮ ಸೇವಾ ಸಮಾಜದ ಶೃಂಗೇರಿ ಕ್ಷೇತ್ರ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ ಮಾತನಾಡಿ, ‘ಆ 27ರಂದು ಕೊಪ್ಪದಲ್ಲಿ ಶೃಂಗೇರಿ ಕ್ಷೇತ್ರಮಟ್ಟದ ವಿಶ್ವಕರ್ಮ ಸಮಾಜದ ವಾರ್ಷಿಕೋತ್ಸವ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿರುವ ಸಮುದಾಯದ 3 ಜನರಿಗೆ ಹಾಗೂ ಶಾಸಕರಿಗೆ ಅಭಿನಂದಿಸಲಾಗುವುದು’ ಎಂದರು.</p>.<p>ಪಟ್ಟಣ ಹಳೇಮಂಡಗದ್ದೆ ವೃತ್ತದ ವ್ಯಾಪ್ತಿಯಲ್ಲಿರುವ ಕಾಳಿಕಾಂಬ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಲಾಗುತ್ತಿದೆ. ಶೃಂಗೇರಿ ಕ್ಷೇತ್ರ ಮೂರು ತಾಲ್ಲೂಕುಗಳಲ್ಲಿ ನರಸಿಂಹರಾಜಪುರದಲ್ಲಿ ಮಾತ್ರ ವಿಶ್ವಕರ್ಮ ಸಮಾಜದ ಕಾಳಿಕಾಂಬ ದೇವಸ್ಥಾನವಿದೆ. ದೇವಸ್ಥಾನ ಜೀರ್ಣೋದ್ಧಾರ ಮಾಡಲು ಸಮಾಜದ ಎಲ್ಲರೂ ಸಹಕಾರ ನೀಡಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂಸೆ(ಎನ್.ಆರ್.ಪುರ): ತಾಲ್ಲೂಕಿನ ಗಾಯಿತ್ರಿ ವಿಶ್ವಕರ್ಮ ಮಹಿಳಾ ಸಂಘದ ಸದಸ್ಯರು ಸಿಂಸೆಯ ವಿಶ್ವಕರ್ಮ ಸಮುದಾಯ ಭವನದಲ್ಲಿ ಶುಕ್ರವಾರ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ನೆರವೇರಿಸಿದರು.</p>.<p>ಪಟ್ಟಣದ ಕಾಳಿಕಾಂಬ ದೇವಸ್ಥಾನದ ಪುರೋಹಿತರಾದ ಶಿವಶಂಕರ ಆಚಾರ್ಯ ಪೂಜಾ ಕಾರ್ಯ ನೆರವೇರಿಸಿದರು.</p>.<p>ಗಾಯಿತ್ರಿ ವಿಶ್ವಕರ್ಮ ಮಹಿಳಾ ಸಂಘದ ಅಧ್ಯಕ್ಷೆ ಜಯಶ್ರೀ ಕೃಷ್ಣಯ್ಯ ಆಚಾರ್ಯ, ಕಾರ್ಯದರ್ಶಿ ಸುಮತಿ ಆಚಾರ್ಯ, ಖಜಾಂಚಿ ಜಯಲಕ್ಷ್ಮೀ ಆಚಾರ್ಯ ಹಾಗೂ ಸದಸ್ಯರು ಇದ್ದರು.</p>.<p><strong>ಶೃಂಗೇರಿ ಕ್ಷೇತ್ರಮಟ್ಟದ ವಿಶ್ವಕರ್ಮ ಸಮಾಜದ ವಾರ್ಷಿಕೋತ್ಸವ</strong>:</p>.<p>ವಿಶ್ವಕರ್ಮ ಸೇವಾ ಸಮಾಜದ ಶೃಂಗೇರಿ ಕ್ಷೇತ್ರ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ ಮಾತನಾಡಿ, ‘ಆ 27ರಂದು ಕೊಪ್ಪದಲ್ಲಿ ಶೃಂಗೇರಿ ಕ್ಷೇತ್ರಮಟ್ಟದ ವಿಶ್ವಕರ್ಮ ಸಮಾಜದ ವಾರ್ಷಿಕೋತ್ಸವ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿರುವ ಸಮುದಾಯದ 3 ಜನರಿಗೆ ಹಾಗೂ ಶಾಸಕರಿಗೆ ಅಭಿನಂದಿಸಲಾಗುವುದು’ ಎಂದರು.</p>.<p>ಪಟ್ಟಣ ಹಳೇಮಂಡಗದ್ದೆ ವೃತ್ತದ ವ್ಯಾಪ್ತಿಯಲ್ಲಿರುವ ಕಾಳಿಕಾಂಬ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಲಾಗುತ್ತಿದೆ. ಶೃಂಗೇರಿ ಕ್ಷೇತ್ರ ಮೂರು ತಾಲ್ಲೂಕುಗಳಲ್ಲಿ ನರಸಿಂಹರಾಜಪುರದಲ್ಲಿ ಮಾತ್ರ ವಿಶ್ವಕರ್ಮ ಸಮಾಜದ ಕಾಳಿಕಾಂಬ ದೇವಸ್ಥಾನವಿದೆ. ದೇವಸ್ಥಾನ ಜೀರ್ಣೋದ್ಧಾರ ಮಾಡಲು ಸಮಾಜದ ಎಲ್ಲರೂ ಸಹಕಾರ ನೀಡಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>