<p><strong>ದಾವಣ(ಎನ್.ಆರ್.ಪುರ):</strong> ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಘಟಕದಿಂದ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಶ್ರೀಜಿತ್ ಗೌಡ ದಂಡಿನಮಕ್ಕೆ ಹೇಳಿದರು.</p>.<p>ಬಾಳೆ ಗ್ರಾ.ಪಂ. ವ್ಯಾಪ್ತಿಯ ದಾವಣ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಪರಿಕರ ವಿತರಿಸಿ ಅವರು ಮಾತನಾಡಿದರು.</p>.<p>ಸರ್ಕಾರಿ ಶಾಲೆಯ ಮಕ್ಕಳಿಗೆ ಮತ್ತು ಪೋಷಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಪೆನ್, ಪುಸ್ತಕ ಮತ್ತು ಪಠ್ಯ ಕಲಿಕೆಗೆ ಪೂರಕವಾಗಿರುವ ಅನೇಕ ಪರಿಕರ ನೀಡಲಾಗಿದೆ ಎಂದರು.</p>.<p>ಗ್ರಾಮದ ಮುಖಂಡ ಶರತ್ ಮಾತನಾಡಿ, ‘ಸದರಿ ಸರ್ಕಾರಿ ಶಾಲೆಗೆ ಹಲವು ವರ್ಷಗಳಿಂದ ಶ್ರೀಜಿತ್ ಅವರು ಸಹಾಯ ಮಾಡಿಕೊಂಡು ಬಂದಿರುತ್ತಾರೆ. ಹಾಗೆ ಈ ವರ್ಷವೂ ಸಹ ಮಕ್ಕಳಿಗೆ ಅನುಕೂಲವಾಗುವಂತೆ ಹಲವು ವಸ್ತುಗಳನ್ನು ತಂದು ಕೊಟ್ಟಿರುತ್ತಾರೆ. ಅವರಿಗೆ ನಮ್ಮ ಶಾಲೆ ಮತ್ತು ಮಕ್ಕಳ ಮೇಲಿರುವ ಪ್ರೀತಿಗೆ ನಾವು ಆಭಾರಿಯಾಗಿರುತ್ತೇವೆ. ಮುಂದೆಯೂ ಸಹ ನಮ್ಮ ಶಾಲೆಗೆ ಅವರ ಸಹಕಾರವಿರಲಿ ಎಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇವೆ’ ಎಂದರು.</p>.<p>ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜೇಶ್ ಬೀಳುವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣ(ಎನ್.ಆರ್.ಪುರ):</strong> ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಘಟಕದಿಂದ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಶ್ರೀಜಿತ್ ಗೌಡ ದಂಡಿನಮಕ್ಕೆ ಹೇಳಿದರು.</p>.<p>ಬಾಳೆ ಗ್ರಾ.ಪಂ. ವ್ಯಾಪ್ತಿಯ ದಾವಣ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಪರಿಕರ ವಿತರಿಸಿ ಅವರು ಮಾತನಾಡಿದರು.</p>.<p>ಸರ್ಕಾರಿ ಶಾಲೆಯ ಮಕ್ಕಳಿಗೆ ಮತ್ತು ಪೋಷಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಪೆನ್, ಪುಸ್ತಕ ಮತ್ತು ಪಠ್ಯ ಕಲಿಕೆಗೆ ಪೂರಕವಾಗಿರುವ ಅನೇಕ ಪರಿಕರ ನೀಡಲಾಗಿದೆ ಎಂದರು.</p>.<p>ಗ್ರಾಮದ ಮುಖಂಡ ಶರತ್ ಮಾತನಾಡಿ, ‘ಸದರಿ ಸರ್ಕಾರಿ ಶಾಲೆಗೆ ಹಲವು ವರ್ಷಗಳಿಂದ ಶ್ರೀಜಿತ್ ಅವರು ಸಹಾಯ ಮಾಡಿಕೊಂಡು ಬಂದಿರುತ್ತಾರೆ. ಹಾಗೆ ಈ ವರ್ಷವೂ ಸಹ ಮಕ್ಕಳಿಗೆ ಅನುಕೂಲವಾಗುವಂತೆ ಹಲವು ವಸ್ತುಗಳನ್ನು ತಂದು ಕೊಟ್ಟಿರುತ್ತಾರೆ. ಅವರಿಗೆ ನಮ್ಮ ಶಾಲೆ ಮತ್ತು ಮಕ್ಕಳ ಮೇಲಿರುವ ಪ್ರೀತಿಗೆ ನಾವು ಆಭಾರಿಯಾಗಿರುತ್ತೇವೆ. ಮುಂದೆಯೂ ಸಹ ನಮ್ಮ ಶಾಲೆಗೆ ಅವರ ಸಹಕಾರವಿರಲಿ ಎಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇವೆ’ ಎಂದರು.</p>.<p>ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜೇಶ್ ಬೀಳುವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>