<p><strong>ಚಿಕ್ಕಮಗಳೂರು:</strong> ಕರ್ನಾಟಕ ನಾಟಕ ಅಕಾಡೆಮಿಯು 2019–20ನೇ ಸಾಲಿನ ವಿವಿಧ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ. ವಾರ್ಷಿಕ ರಂಗಪ್ರಶಸ್ತಿ 25 ಮಂದಿಗೆಸಂದಿದ್ದು, ಜಿಲ್ಲೆಯ ಶೃಂಗೇರಿಯ ವಿದ್ಯಾರಣ್ಯಪುರದ ಬಿ.ಎಲ್.ರವಿಕುಮಾರ್ ಅವರು ಈ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.</p>.<p>ವಾರ್ಷಿಕ ರಂಗಪ್ರಶಸ್ತಿಯು ₹ 25 ಸಾವಿರ ನಗದು, ಪ್ರಶಸ್ತಿ ಪತ್ರ, ಫಲಕ ಒಳಗೊಂಡಿದೆ.</p>.<p>ರವಿಕುಮಾರ್ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಕಲಾ ಕ್ಷೇತ್ರದಲ್ಲಿ ಸಕ್ರಿಯವಾಗಿರುವಾಗಲೇ ಪ್ರಶಸ್ತಿ ಸಂದಿರುವುದ ಬಹಳ ಖುಷಿ ತಂದಿದೆ.</p>.<p>ಕಲಾವಿದರಿಗೆ ಪುರಸ್ಕಾರಗಳು ಪ್ರೇರಣೆ ‘ಟಾನಿಕ್’ ಇದ್ದಂತೆ. ರಂಗಭೂಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು, ಇನ್ನು ಹೆಚ್ಚು ಕೆಲಸ ಮಾಡಲು ಹುಮ್ಮಸ್ಸು ಹೆಚ್ಚಿಸಿದೆ’ ಎಂದು ಸಂತಸ ಹಂಚಿಕೊಂಡರು.</p>.<p>ರವಿಕುಮಾರ್ ಅವರು ಬಿ.ಎಲ್.ಲಕ್ಷ್ಮಿನಾರಾಯಣಯ್ಯ, ವಿಶಾಲಾಕ್ಷ್ಮಮ್ಮ ದಂಪತಿ ಪುತ್ರ. ಬಿ.ಎಸ್ಸಿ, ಬಿ.ಇಡಿ ಪದವೀಧರರಾಗಿರುವ ರವಿಕುಮಾರ್ ಶೃಂಗೇರಿ ತಾಲ್ಲೂಕಿನ ಕಿಗ್ಗಾದ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.</p>.<p>ಹೈಸ್ಕೂಲು ದಿನಗಳಿಂದಲೇ ನಾಟಕ, ಚರ್ಚಾಸ್ಪರ್ಧೆ, ಏಕಪಾತ್ರಾಭಿಯ ಗೀಳು ಮೈಗೂಡಿತ್ತು. ಕಾಲೇಜು ದಿನಗಳಲ್ಲಿ ಕಲಾವಿದರಾಗಿ ಬೆಳೆದರು.</p>.<p>ನಿರಂತರವಾಗಿ ರಂಗಭೂಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸಾಮಾಜಿಕ, ಪೌರಾಣಿಕ, ಐತಿಹಾಸಿಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಕಾಳಿಂಗ ನಾವುಡ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ರಂಗಮಿತ್ರರು ತಂಡಗಳ ಪ್ರಮುಖ ಕಲಾವಿದ.</p>.<p>‘ಕರ್ಣಭಾರ’, ‘ಕಲೆಯ ಕೊಲೆ’, ‘ಸುಳಿಯಲ್ಲಿ ಸಿಕ್ಕವರು’, ‘ಅರಮನೆ ಕಥಾಪ್ರಸಂಗ’, ‘ಹೀಗೊಂದು ಕತೆ’ ಸಹಿತ ಸುಮಾರು 70 ನಾಟಕಗಳಲ್ಲಿ ಈವರೆಗೆ ಅಭಿನಯಿಸಿದ್ದಾರೆ. ಚಂದನ ವಾಹಿನಿಯ ‘ಮಲೆನಾಡ ಮಡಿಲಿಂದ’ ಧಾರಾವಾಹಿಯಲ್ಲೂ ಅಭಿನಯಿಸಿದ್ದಾರೆ.</p>.<p>2001ರಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಾಧನೆಗೆ ಹಲವಾರು ಪ್ರಶಸ್ತಿಗಳು ಸಂದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಕರ್ನಾಟಕ ನಾಟಕ ಅಕಾಡೆಮಿಯು 2019–20ನೇ ಸಾಲಿನ ವಿವಿಧ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ. ವಾರ್ಷಿಕ ರಂಗಪ್ರಶಸ್ತಿ 25 ಮಂದಿಗೆಸಂದಿದ್ದು, ಜಿಲ್ಲೆಯ ಶೃಂಗೇರಿಯ ವಿದ್ಯಾರಣ್ಯಪುರದ ಬಿ.ಎಲ್.ರವಿಕುಮಾರ್ ಅವರು ಈ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.</p>.<p>ವಾರ್ಷಿಕ ರಂಗಪ್ರಶಸ್ತಿಯು ₹ 25 ಸಾವಿರ ನಗದು, ಪ್ರಶಸ್ತಿ ಪತ್ರ, ಫಲಕ ಒಳಗೊಂಡಿದೆ.</p>.<p>ರವಿಕುಮಾರ್ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಕಲಾ ಕ್ಷೇತ್ರದಲ್ಲಿ ಸಕ್ರಿಯವಾಗಿರುವಾಗಲೇ ಪ್ರಶಸ್ತಿ ಸಂದಿರುವುದ ಬಹಳ ಖುಷಿ ತಂದಿದೆ.</p>.<p>ಕಲಾವಿದರಿಗೆ ಪುರಸ್ಕಾರಗಳು ಪ್ರೇರಣೆ ‘ಟಾನಿಕ್’ ಇದ್ದಂತೆ. ರಂಗಭೂಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು, ಇನ್ನು ಹೆಚ್ಚು ಕೆಲಸ ಮಾಡಲು ಹುಮ್ಮಸ್ಸು ಹೆಚ್ಚಿಸಿದೆ’ ಎಂದು ಸಂತಸ ಹಂಚಿಕೊಂಡರು.</p>.<p>ರವಿಕುಮಾರ್ ಅವರು ಬಿ.ಎಲ್.ಲಕ್ಷ್ಮಿನಾರಾಯಣಯ್ಯ, ವಿಶಾಲಾಕ್ಷ್ಮಮ್ಮ ದಂಪತಿ ಪುತ್ರ. ಬಿ.ಎಸ್ಸಿ, ಬಿ.ಇಡಿ ಪದವೀಧರರಾಗಿರುವ ರವಿಕುಮಾರ್ ಶೃಂಗೇರಿ ತಾಲ್ಲೂಕಿನ ಕಿಗ್ಗಾದ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.</p>.<p>ಹೈಸ್ಕೂಲು ದಿನಗಳಿಂದಲೇ ನಾಟಕ, ಚರ್ಚಾಸ್ಪರ್ಧೆ, ಏಕಪಾತ್ರಾಭಿಯ ಗೀಳು ಮೈಗೂಡಿತ್ತು. ಕಾಲೇಜು ದಿನಗಳಲ್ಲಿ ಕಲಾವಿದರಾಗಿ ಬೆಳೆದರು.</p>.<p>ನಿರಂತರವಾಗಿ ರಂಗಭೂಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸಾಮಾಜಿಕ, ಪೌರಾಣಿಕ, ಐತಿಹಾಸಿಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಕಾಳಿಂಗ ನಾವುಡ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ರಂಗಮಿತ್ರರು ತಂಡಗಳ ಪ್ರಮುಖ ಕಲಾವಿದ.</p>.<p>‘ಕರ್ಣಭಾರ’, ‘ಕಲೆಯ ಕೊಲೆ’, ‘ಸುಳಿಯಲ್ಲಿ ಸಿಕ್ಕವರು’, ‘ಅರಮನೆ ಕಥಾಪ್ರಸಂಗ’, ‘ಹೀಗೊಂದು ಕತೆ’ ಸಹಿತ ಸುಮಾರು 70 ನಾಟಕಗಳಲ್ಲಿ ಈವರೆಗೆ ಅಭಿನಯಿಸಿದ್ದಾರೆ. ಚಂದನ ವಾಹಿನಿಯ ‘ಮಲೆನಾಡ ಮಡಿಲಿಂದ’ ಧಾರಾವಾಹಿಯಲ್ಲೂ ಅಭಿನಯಿಸಿದ್ದಾರೆ.</p>.<p>2001ರಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಾಧನೆಗೆ ಹಲವಾರು ಪ್ರಶಸ್ತಿಗಳು ಸಂದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>