<p><strong>ಚಿಕ್ಕಮಗಳೂರು:</strong> ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ ಫೆ.10 ರಿಂದ 18 ರವರೆಗೆ ನಡೆಯಲಿದ್ದು, ಒಂದರಿಂದ 19 ವರ್ಷದೊಳಗಿನ ಮಕ್ಕಳಿಗೆ ಜಂತು ಹುಳು ನಿವಾರಣಾ ಮಾತ್ರೆಗಳನ್ನು ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ ತಿಳಿಸಿದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣಾ ಅಭಿಯಾನದ ಪ್ರಯುಕ್ತ ಸೋಮವಾರ ನಡೆದ ಅಂತರ ಇಲಾಖೆಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದಡಿ ಜಂತುಹುಳು ನಿವಾರಣಾ ಕಾರ್ಯಕ್ರಮದ ಚಟುವಟಿಕೆಗಳನ್ನು 2015-16ನೇ ಸಾಲಿನಿಂದ ಯಶಸ್ವಿಯಾಗಿ ನಡೆಸಲಾಗುತ್ತಿದೆ. ಕಾರ್ಯಕ್ರಮದ ಮಾರ್ಗಸೂಚಿಯಂತೆ ವರ್ಷದಲ್ಲಿ 2 ಬಾರಿ ಫೆಬ್ರುವರಿ ಮತ್ತು ಆಗಸ್ಟ್ ತಿಂಗಳಿನಲ್ಲಿ ನಡೆಸಲಾಗುತ್ತಿದೆ ಎಂದು ತಿಳಿಸಿದರು.</p>.<p>ರಾಜ್ಯದಾದ್ಯಂತ 1 ರಿಂದ 19 ವರ್ಷದ ಎಲ್ಲಾ ಮಕ್ಕಳಿಗೆ ಜಂತು ಹುಳು ನಿವಾರಣಾ ಮಾತ್ರೆಗಳನ್ನು ಶಾಲಾ-ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ವಿತರಿಸಲಾಗುತ್ತಿದೆ. ತರಬೇತಿ ಹೊಂದಿದ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿ ಮೇಲ್ವಿಚಾರಣೆಯಲ್ಲಿ ಮಾತ್ರೆ ನೀಡಲಾಗುವುದು. ಜಿಲ್ಲೆಯಲ್ಲಿ ಈಗಾಗಲೇ 1 ರಿಂದ 19 ವರ್ಷದೊಳಗಿನ ಮಕ್ಕಳ ಪಟ್ಟಿಯನ್ನು ಪಡೆಯಲಾಗಿದೆ. ಆದಂತೆ 2.23 ಲಕ್ಷ ಮಕ್ಕಳಿದ್ದು, ಈ ಕಾರ್ಯಕ್ರಮಕ್ಕಾಗಿ ಈಗಾಗಲೇ ರಾಜ್ಯಮಟ್ಟದಿಂದ 2.80 ಲಕ್ಷ ಮಾತ್ರೆಗಳು ಬಂದಿದ್ದು ಸಂಸ್ಥೆವಾರು ಔಷಧಿನು ವಿತರಣೆ ಮಾಡಲಾಗಿದೆ ಎಂದರು.</p>.<p>ಈ ಕಾರ್ಯಕ್ರಮಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಮನ್ವಯದೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಲಾಗುವುದು ಎಂದು ಹೇಳಿದರು.</p>.<p>ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಎಚ್.ಕೆ. ಮಂಜುನಾಥ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ತಿಮ್ಮಯ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ ಫೆ.10 ರಿಂದ 18 ರವರೆಗೆ ನಡೆಯಲಿದ್ದು, ಒಂದರಿಂದ 19 ವರ್ಷದೊಳಗಿನ ಮಕ್ಕಳಿಗೆ ಜಂತು ಹುಳು ನಿವಾರಣಾ ಮಾತ್ರೆಗಳನ್ನು ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ ತಿಳಿಸಿದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣಾ ಅಭಿಯಾನದ ಪ್ರಯುಕ್ತ ಸೋಮವಾರ ನಡೆದ ಅಂತರ ಇಲಾಖೆಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದಡಿ ಜಂತುಹುಳು ನಿವಾರಣಾ ಕಾರ್ಯಕ್ರಮದ ಚಟುವಟಿಕೆಗಳನ್ನು 2015-16ನೇ ಸಾಲಿನಿಂದ ಯಶಸ್ವಿಯಾಗಿ ನಡೆಸಲಾಗುತ್ತಿದೆ. ಕಾರ್ಯಕ್ರಮದ ಮಾರ್ಗಸೂಚಿಯಂತೆ ವರ್ಷದಲ್ಲಿ 2 ಬಾರಿ ಫೆಬ್ರುವರಿ ಮತ್ತು ಆಗಸ್ಟ್ ತಿಂಗಳಿನಲ್ಲಿ ನಡೆಸಲಾಗುತ್ತಿದೆ ಎಂದು ತಿಳಿಸಿದರು.</p>.<p>ರಾಜ್ಯದಾದ್ಯಂತ 1 ರಿಂದ 19 ವರ್ಷದ ಎಲ್ಲಾ ಮಕ್ಕಳಿಗೆ ಜಂತು ಹುಳು ನಿವಾರಣಾ ಮಾತ್ರೆಗಳನ್ನು ಶಾಲಾ-ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ವಿತರಿಸಲಾಗುತ್ತಿದೆ. ತರಬೇತಿ ಹೊಂದಿದ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿ ಮೇಲ್ವಿಚಾರಣೆಯಲ್ಲಿ ಮಾತ್ರೆ ನೀಡಲಾಗುವುದು. ಜಿಲ್ಲೆಯಲ್ಲಿ ಈಗಾಗಲೇ 1 ರಿಂದ 19 ವರ್ಷದೊಳಗಿನ ಮಕ್ಕಳ ಪಟ್ಟಿಯನ್ನು ಪಡೆಯಲಾಗಿದೆ. ಆದಂತೆ 2.23 ಲಕ್ಷ ಮಕ್ಕಳಿದ್ದು, ಈ ಕಾರ್ಯಕ್ರಮಕ್ಕಾಗಿ ಈಗಾಗಲೇ ರಾಜ್ಯಮಟ್ಟದಿಂದ 2.80 ಲಕ್ಷ ಮಾತ್ರೆಗಳು ಬಂದಿದ್ದು ಸಂಸ್ಥೆವಾರು ಔಷಧಿನು ವಿತರಣೆ ಮಾಡಲಾಗಿದೆ ಎಂದರು.</p>.<p>ಈ ಕಾರ್ಯಕ್ರಮಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಮನ್ವಯದೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಲಾಗುವುದು ಎಂದು ಹೇಳಿದರು.</p>.<p>ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಎಚ್.ಕೆ. ಮಂಜುನಾಥ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ತಿಮ್ಮಯ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>