ಇಲ್ಲಿ ಸೇತುವೆ ನಿರ್ಮಿಸುವ ಸಲುವಾಗಿ ಮಣ್ಣಿನ ಗುಣಮಟ್ಟವನ್ನು ಪರೀಕ್ಷಿಸಲು ಲೋಕೋಪಯೋಗಿ ಇಲಾಖೆಯು ಗುತ್ತಿಗೆದಾರರ ಮೂಲಕ ಕಾರ್ಮಿಕರನ್ನು ನಿಯೋಜಿಸಿದೆ. ಜೂನ್ 14ರ ರಾತ್ರಿ ಸುರಿದ ಭಾರಿ ಮಳೆಗೆ ನೆರಳಕೊಡಿಗೆಯಲ್ಲಿ ಭಾರಿ ಪ್ರಮಾಣದಲ್ಲಿ ರಸ್ತೆ ಮತ್ತು ಗುಡ್ಡ ಜರಿದಿತ್ತು. ಈಗಲೂ ಗುಡ್ಡದ ಮೇಲಿನಿಂದ ತುಂಡು ತುಂಡಾಗಿ ಜರಿಯುತ್ತಿದೆ. ಸ್ಥಳದಲ್ಲಿ ಯಾರೂ ಓಡಾಡದಂತೆ ಪೊಲೀಸರು ಮತ್ತು ಜಿಲ್ಲಾಡಳಿತ ಬ್ಯಾರಿಕೇಡ್ಗಳನ್ನು ಹಾಕಿದ್ದಾರೆ. ಬೃಹತ್ ವಾಹನಗಳ ಸಂಚಾರ ನಿಷೇಧಿಸಿ, 10 ಅಡಿ ಎತ್ತರಕ್ಕೆ ಕಮಾನ್ ನಿರ್ಮಿಸಲಾಗಿದೆ. ಸಣ್ಣ ವಾಹನ ಓಡಾಡಲು ಹಳೆ ರಸ್ತೆಯ ಮೂಲಕ ಅವಕಾಶ ನೀಡಲಾಗಿದೆ.