<p>ವಿಜಯಕುಮಾರ್ ಎಸ್.ಕೆ.</p>.<p>ಚಿಕ್ಕಮಗಳೂರು: ಮಲೆನಾಡು ನಕ್ಸಲ್ ಮುಕ್ತವಾದ ಬಳಿಕ ನಕ್ಸಲ್ ಪ್ರದೇಶದ ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರ ಮುಂದಾಗಿದ್ದು, ₹9.12 ಕೋಟಿ ಬಿಡುಗಡೆ ಮಾಡಿದೆ. </p>.<p>ಅರಣ್ಯ ಸಮಸ್ಯೆ, ಭೂಮಿಯ ಸಮಾನ ಹಂಚಿಕೆ, ಮೂಲ ಸೌಕರ್ಯ, ಉದ್ಯೋಗ, ಸಮಾನ ವೇತನ ಬೇಡಿಕೆಗಳೊಂದಿಗೆ ನಕ್ಸಲ್ ಹೋರಾಟ ಆರಂಭವಾಯಿತು. ಈ ಪ್ರದೇಶಗಳಲ್ಲಿ ಈಗಲೂ ಹಲವು ಹಳ್ಳಿಗಳಿಗೆ ರಸ್ತೆ ಸೇರಿದಂತೆ ಮೂಲಸೌಕರ್ಯ ಇಲ್ಲವಾಗಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನದ ಹೆಸರಿನಲ್ಲಿ ಕಾಡಂಚಿನ ಜನರನ್ನು ಒಕ್ಕಲೆಬ್ಬಿಸುವ ಪ್ರಯತ್ನ ಶುರುವಾಗಿ ನಾಲ್ಕೈದು ದಶಕಗಳೇ ಕಳೆದಿವೆ. ಅತಂತ್ರ ಸ್ಥಿತಿಯ ನಡುವೆ ಕಾಡಿನ ಜನರ ಬದುಕು ಅಕ್ಷರಶಃ ಮೂರಾಬಟ್ಟೆಯಾಗಿದೆ.</p>.<p>ನಕ್ಸಲ್ ಚಳವಳಿ 25 ವರ್ಷಗಳ ಬಳಿಕ 2025ರಲ್ಲಿ ಅಂತ್ಯ ಕಂಡಿತು. ವಿಕ್ರಂ ಗೌಡ ಎನ್ಕೌಂಟರ್ ಬಳಿಕ ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಸಮಿತಿ ಮುಂದೆ ಎಲ್ಲ ಏಳು ನಕ್ಸಲರು ಶರಣಾಗತಿ ಸಮಿತಿ ಮುಂದೆ ಹಾಜರಾದರು.</p>.<p>ಎಲ್ಲರನ್ನು ಮುಖ್ಯವಾಹಿನಿಗೆೆ ಬರ ಮಾಡಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ನಕ್ಸಲ್ ಮುಕ್ತ ರಾಜ್ಯ ಎಂದು ಘೋಷಣೆ ಮಾಡಿದರು. ಬಳಿಕ 2025–26ನೇ ಸಾಲಿನ ಬಜೆಟ್ನಲ್ಲಿ ನಕ್ಸಲ್ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ₹10 ಕೋಟಿ ಅನುದಾನ ಘೋಷಣೆ ಮಾಡಿದರು.</p>.<p>ಸರ್ಕಾರ ಈಗ ಬಿಡುಗಡೆ ಮಾಡಿರುವ ₹9.12 ಕೋಟಿಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಖ್ಯವಾಹಿನಿಗೆ ಬಂದ ನಕ್ಸಲರ ಪ್ರೋತ್ಸಾಹ ಧನಕ್ಕಾಗಿ (ಸ್ವಯಂ ಉದ್ಯೋಗಕ್ಕೆ) ₹27.10 ಲಕ್ಷ ನೀಡಿದೆ. ಮೂಲಸೌಕರ್ಯ ಕಾಮಗಾರಿಗಾಗಿ ಉಡುಪಿ ಜಿಲ್ಲೆಗೆ ₹ 2 ಕೋಟಿ, ಚಿಕ್ಕಮಗಳೂರು ಜಿಲ್ಲೆಗೆ ₹7.12 ಕೋಟಿ ನೀಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಕುಮಾರ್ ಎಸ್.ಕೆ.</p>.<p>ಚಿಕ್ಕಮಗಳೂರು: ಮಲೆನಾಡು ನಕ್ಸಲ್ ಮುಕ್ತವಾದ ಬಳಿಕ ನಕ್ಸಲ್ ಪ್ರದೇಶದ ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರ ಮುಂದಾಗಿದ್ದು, ₹9.12 ಕೋಟಿ ಬಿಡುಗಡೆ ಮಾಡಿದೆ. </p>.<p>ಅರಣ್ಯ ಸಮಸ್ಯೆ, ಭೂಮಿಯ ಸಮಾನ ಹಂಚಿಕೆ, ಮೂಲ ಸೌಕರ್ಯ, ಉದ್ಯೋಗ, ಸಮಾನ ವೇತನ ಬೇಡಿಕೆಗಳೊಂದಿಗೆ ನಕ್ಸಲ್ ಹೋರಾಟ ಆರಂಭವಾಯಿತು. ಈ ಪ್ರದೇಶಗಳಲ್ಲಿ ಈಗಲೂ ಹಲವು ಹಳ್ಳಿಗಳಿಗೆ ರಸ್ತೆ ಸೇರಿದಂತೆ ಮೂಲಸೌಕರ್ಯ ಇಲ್ಲವಾಗಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನದ ಹೆಸರಿನಲ್ಲಿ ಕಾಡಂಚಿನ ಜನರನ್ನು ಒಕ್ಕಲೆಬ್ಬಿಸುವ ಪ್ರಯತ್ನ ಶುರುವಾಗಿ ನಾಲ್ಕೈದು ದಶಕಗಳೇ ಕಳೆದಿವೆ. ಅತಂತ್ರ ಸ್ಥಿತಿಯ ನಡುವೆ ಕಾಡಿನ ಜನರ ಬದುಕು ಅಕ್ಷರಶಃ ಮೂರಾಬಟ್ಟೆಯಾಗಿದೆ.</p>.<p>ನಕ್ಸಲ್ ಚಳವಳಿ 25 ವರ್ಷಗಳ ಬಳಿಕ 2025ರಲ್ಲಿ ಅಂತ್ಯ ಕಂಡಿತು. ವಿಕ್ರಂ ಗೌಡ ಎನ್ಕೌಂಟರ್ ಬಳಿಕ ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಸಮಿತಿ ಮುಂದೆ ಎಲ್ಲ ಏಳು ನಕ್ಸಲರು ಶರಣಾಗತಿ ಸಮಿತಿ ಮುಂದೆ ಹಾಜರಾದರು.</p>.<p>ಎಲ್ಲರನ್ನು ಮುಖ್ಯವಾಹಿನಿಗೆೆ ಬರ ಮಾಡಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ನಕ್ಸಲ್ ಮುಕ್ತ ರಾಜ್ಯ ಎಂದು ಘೋಷಣೆ ಮಾಡಿದರು. ಬಳಿಕ 2025–26ನೇ ಸಾಲಿನ ಬಜೆಟ್ನಲ್ಲಿ ನಕ್ಸಲ್ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ₹10 ಕೋಟಿ ಅನುದಾನ ಘೋಷಣೆ ಮಾಡಿದರು.</p>.<p>ಸರ್ಕಾರ ಈಗ ಬಿಡುಗಡೆ ಮಾಡಿರುವ ₹9.12 ಕೋಟಿಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಖ್ಯವಾಹಿನಿಗೆ ಬಂದ ನಕ್ಸಲರ ಪ್ರೋತ್ಸಾಹ ಧನಕ್ಕಾಗಿ (ಸ್ವಯಂ ಉದ್ಯೋಗಕ್ಕೆ) ₹27.10 ಲಕ್ಷ ನೀಡಿದೆ. ಮೂಲಸೌಕರ್ಯ ಕಾಮಗಾರಿಗಾಗಿ ಉಡುಪಿ ಜಿಲ್ಲೆಗೆ ₹ 2 ಕೋಟಿ, ಚಿಕ್ಕಮಗಳೂರು ಜಿಲ್ಲೆಗೆ ₹7.12 ಕೋಟಿ ನೀಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>