ಗುರುಮೂರ್ತಿ ಸ್ವಾಮೀಜಿ ಮಾತನಾಡಿ, ‘ದೇವಸ್ಥಾನಗಳು ನಮ್ಮ ಮನಸ್ಸನ್ನು ಧರ್ಮ ಮಾರ್ಗದಲ್ಲಿ ನಡೆಯಲು ಪ್ರೇರೇಪಿಸುತ್ತವೆ. ದೇವಸ್ಥಾನಗಳನ್ನು ಕಟ್ಟಿದರಷ್ಟೆ ಸಾಲದು. ಆ ಸ್ಥಳದಲ್ಲಿರುವ ಮಹತ್ವ ಮತ್ತು ಸಕಾರಾತ್ಮಕ ಶಕ್ತಿಯ ಪೂರ್ಣ ಪ್ರಯೋಜನವನ್ನು ಎಲ್ಲರೂ ಪಡೆಯಬೇಕು’ ಎಂದರು. ಎಂ.ಕೆ.ಚಂದ್ರಪ್ಪ, ಸಮಿತಿ ಅಧ್ಯಕ್ಷ ಎಂ.ಎಚ್.ರವಿ, ಗ್ರಾಮ ಪಂಚಾಯಿತಿ ಸದಸ್ಯ ಚೆನ್ನಪ್ಪ, ಪೂಜಾರಿ ಬಸವರಾಜು, ಎಂ.ಟಿ.ಮಂಜುನಾಥ್, ಎಂ.ಎನ್.ಓಂಕಾರ್, ದೇವಸ್ಥಾನದ ಸಮಿತಿ ಸದಸ್ಯರು ಇದ್ದರು.